ಬ್ರೇಕಿಂಗ್ ನ್ಯೂಸ್
14-11-23 07:42 pm Mangalore Correspondent ಕರಾವಳಿ
ಉಳ್ಳಾಲ, ನ.14: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿ ಎಸ್ಕೇಪ್ ಆಗಿದ್ದ ಕುಂಪಲದ ಸೈಕೋ ರಿಕ್ಷಾ ಚಾಲಕನನ್ನ ಉಳ್ಳಾಲ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ಜೈಲಿಗಟ್ಟಿದ್ದಾರೆ.
ಕಳೆದ ಆದಿತ್ಯವಾರ ಸಂಜೆ ಕುಂಪಲ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿದ್ದ ರಿಕ್ಷಾ ಚಾಲಕ ಸುಶಾಂತ್(31) ಎಂಬವರಿಗೆ ಅದೇ ಪಾರ್ಕಿನಲ್ಲಿ ರಿಕ್ಷಾ ಚಾಲನೆ ಮಾಡುತ್ತಿರುವ ರೋಕೇಶ್(37) ಯಾನೆ ಸೈಕೋ ರೋಸ್ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಥಳಿಸಿದ ಪರಿಣಾಮ ಸುಶಾಂತ್ ಅವರ ಎರಡು ಹಲ್ಲುಗಳು ಉದುರಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಸುಶಾಂತ್ ರವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಹಲ್ಲೆಗೈದ ಆರೋಪಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರೋಕೇಶ್ ತಲೆಮರೆಸಿಕೊಂಡಿದ್ದ.
ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ರವರು ಸೋಮವಾರವೇ ತನ್ನ ಸಿಬ್ಬಂದಿಗಳೊಂದಿಗೆ ಅತೀ ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿ ರೋಕೇಶ್ ಯಾನೆ ಸೈಕೊ ರೋಸ್ ಕುಂಪಲ ನಿವಾಸಿಯಾಗಿದ್ದು ಅಮಲು ಪದಾರ್ಥಗಳಿಗೆ ದಾಸನಾಗಿ ಪ್ರದೇಶಕ್ಕೆ ಕಂಟಕಪ್ರಾಯನಾಗಿದ್ದ. ಈತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸ್ಥಳೀಯ ಹೆಣ್ಮಕ್ಕಳಿಗೆ ಲೈಗಿಂಕ ಕಿರುಕುಳ ನೀಡಿ ಸಾರ್ವಜನಿಕರಿಂದ ಶಾಸ್ತಿ ಮಾಡಿಸಿಕೊಂಡಿದ್ದ. ಆರೋಪಿಯ ಸಹೋದರ ವೃತ್ತಿಪರ ವಕೀಲನಾಗಿದ್ದು ಆತನ ಧೈರ್ಯದಿಂದಲೇ ಸೈಕೋ ರೋಸ್ ನಿರಂತರ ಅಪರಾಧ ಕೃತ್ಯ ಎಸಗುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ದಿನ ನಿತ್ಯವೂ ನಶೆಯಲ್ಲೇ ರಿಕ್ಷಾ ಚಾಲನೆ ನಡೆಸುತ್ತಿರುವ ರೋಕೇಶನ ನಡವಳಿಕೆಯ ಬಗ್ಗೆ ಬೈಪಾಸಿನ ರಿಕ್ಷಾ ಚಾಲಕರು, ಮಾಲಕರೇ ಒಟ್ಟಾಗಿ ಉಳ್ಳಾಲ ಠಾಣೆಗೆ ಬರವಣಿಗೆಯಲ್ಲಿ ಮಾಹಿತಿ ಕೊಟ್ಟಿದ್ದು ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.
Auto driver assults driver at auto stand at Kumpala in Mangalore, arrested within hours by Ullal Police.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm