ಬ್ರೇಕಿಂಗ್ ನ್ಯೂಸ್
15-11-23 05:50 pm Mangalore Correspondent ಕರಾವಳಿ
ಮಂಗಳೂರು, ನ.15: ಯಡಿಯೂರಪ್ಪರನ್ನು ಕಣ್ಣೀರಾಕಿಸಿ ಮುಖ್ಯಮಂತ್ರಿ ಪದವಿಯಿಂದ ಯಾಕೆ ಇಳಿಸಿದ್ರು ಅಂತ ಬಿಜೆಪಿಯವರಿಗೆ ಇನ್ನೂ ಗೊತ್ತಿಲ್ಲ. ಈಗ ವಿಜಯೇಂದ್ರ ಬಂದಿದ್ದಾರೆ ಅವರೇ ಮಾಹಿತಿ ಕೊಡಬಹುದು. ಬಿಜೆಪಿಯಲ್ಲಿ ಹೊಂದಾಣಿಕೆಯಿಲ್ಲ, ನಾಯಕತ್ವದ ಕೊರತೆಯಿದೆ. ಹೀಗಾಗಿ ವಿಜಯೇಂದ್ರಗೆ ಪಟ್ಟ ಸಿಕ್ಕಿದೆ ಎಂದು ವಿಶ್ಲೇಷಣೆ ಮಾಡಿದ್ದಾರೆ ಸಚಿವ ಪ್ರಿಯಾಂಕ ಖರ್ಗೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದಿಂದ ಕಾಂಗ್ರೆಸ್ ಮೇಲೆ ಎಫೆಕ್ಟ್ ಆಗುತ್ತಾ ಎಂದು ಮಂಗಳೂರಿನಲ್ಲಿ ಕೇಳಿದ ಪ್ರಶ್ನೆಗೆ, ಇದರಿಂದ ಕಾಂಗ್ರೆಸ್ ಮೇಲೆ ಒಳ್ಳೆ ರೀತಿಯ ಎಫೆಕ್ಟ್ ಆಗುತ್ತೆ. ಲಿಂಗಾಯತ ಸಮುದಾಯಕ್ಕೆ ಬಿಜೆಪಿಯಿಂದ ಆದ ನಿರ್ಲಕ್ಷ್ಯದಿಂದ ಕಾಂಗ್ರೆಸ್ ಆಡಳಿತಕ್ಕೆ ಬಂದಿಲ್ಲ. ಕಳೆದ ಸರ್ಕಾರದ ಅವಧಿಯ ಭ್ರಷ್ಟಾಚಾರ, ಬೆಲೆಯೇರಿಕೆ ಈ ಎಲ್ಲಾ ಕಾರಣದಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ. ಇಷ್ಟಕ್ಕೂ ನಿರ್ಲಕ್ಷ್ಯ ಯಾಕೆ ಮಾಡಿದ್ರು ಅಂತಾ ಅವರೇ ಹೇಳಬೇಕಲ್ವಾ.. ಯಡಿಯೂರಪ್ಪ ಅವರನ್ನು ಕಣ್ಣೀರಾಕಿಸಿ ಇಳಿಸಿದ್ದು ಯಾಕೆಂದು ಅವರೇ ಹೇಳಬೇಕಲ್ವಾ ಎಂದು ಕೇಳಿದರು.
ಸಿ.ಟಿ ರವಿ, ಯತ್ನಾಳ್, ಸುನೀಲ್ ಕುಮಾರ್ ಇವತ್ತು ಗಾಯಬ್ ಆಗಿದ್ದಾರೆ. ವಿಜಯೇಂದ್ರ ಅವರಿಗೆ ನಾವು ಶುಭ ಹಾರೈಸುತ್ತೇವೆ. ಆದ್ರೆ ಬಿಜೆಪಿಯವರೇ ಶುಭ ಹಾರೈಸ್ತಿದ್ದಾರೆಯೇ ಎಂದು ನಾವು ಕೇಳಬೇಕಾಗಿದೆ. ಬಿಜೆಪಿಯವರ ವೀಕ್ ನೆಸ್ ಮೇಲೆ ನಾವು ಸ್ಟ್ರಾಟಜಿ ಮಾಡೋರಲ್ಲ. ಕಾಂಗ್ರೆಸ್ ಯೋಜನೆಗಳು, ಸ್ವಂತ ಶಕ್ತಿಯ ಮೇಲೆ ಓಟು ಕೇಳುತ್ತೇವೆ ಎಂದರು. ಇನ್ನು ಬಿಜೆಪಿಯ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರನ್ನು ಕಟ್ಕೊಂಡು ನಮಗೇನು ಮಾಡೋಕಿದೆ. ಆರು ತಿಂಗಳಾಗಿದೆ, ಮೇಲ್ಮನೆ, ಕೆಳಮನೆಯಲ್ಲಿ ವಿರೋಧ ಪಕ್ಷದ ನಾಯಕನೇ ಇಲ್ಲ. ರಾಜ್ಯಪಾಲರ ಭಾಷಣ, ಬಜೆಟ್ ಮಂಡನೆ, ಬಜೆಟ್ ಭಾಷಣ ಆದ್ರೂ ನಾಯಕನ ಆಯ್ಕೆಯಾಗಿಲ್ಲ. 15 ದಿನದಲ್ಲಿ ಬೆಳಗಾವಿ ಅಧಿವೇಶನ ಪ್ರಾರಂಭ ಆಗುತ್ತೆ. ವಿರೋಧ ಪಕ್ಷದ ನಾಯಕ ಯಾರು..? ಯಾವುದೇ ಲೀಡರ್ ಬಿಜೆಪಿಯಲ್ಲಿ ಇಲ್ಲ ಎಂದು ಟೀಕಿಸಿದರು.
ಜೆಡಿಎಸ್ ಕಚೇರಿ ಗೋಡೆ ಮೇಲೆ ವಿದ್ಯುತ್ ಕಳ್ಳ ಕುಮಾರಸ್ವಾಮಿ ಪೋಸ್ಟರ್ ಹಾಕಿದ್ದು ಕಾಂಗ್ರೆಸ್ ನವರಾ ಎಂಬ ಪ್ರಶ್ನೆಗೆ, ನಮಗೇ ಬೇರೆ ಕೆಲಸ ಇಲ್ವಾ.. ನಾವು ಆಡಳಿತ ನಡೆಸ್ತಾ ಇದ್ದೀವಿ ಸ್ವಾಮಿ. ಹಾಗೇನಾದ್ರೂ ಮಾಡಬೇಕಂದ್ರೆ ಬಹಿರಂಗವಾಗಿ ಮಾಡ್ತೀವಿ. ಪೇ ಸಿಎಂ ಕ್ಯಾಂಪೇನ್ ಮಾಡಿಲ್ವಾ..? ಅದೇನು ರಾತ್ರೋರಾತ್ರಿ ಹಾಕಿದ್ದಾ. ಎದೇ ತಟ್ಟಿ ಮುಂದೆ ಬಂದು ಭ್ರಷ್ಟಾಚಾರ ಮಾಡ್ತಿದ್ದೀರಿ ಎಂದು ಹೇಳಿದ್ದೇವೆ. ನಿರಾಧಾರವಾಗಿ ನಾವು ಯಾವುದನ್ನೂ ಮಾಡಿಲ್ಲ. ಸಿಬ್ಬಂದಿಯಿಂದ ಕುಮಾರಸ್ವಾಮಿ ಮನೆಯಲ್ಲಿ ಏನು ಅಚಾತುರ್ಯ ನಡೆದಿದೆ ಎಂದು ನಂಗೆ ಗೊತ್ತಿಲ್ಲ. ಕಾನೂನಾತ್ಮಕ ಕ್ರಮ ತಗೊಳ್ಳಿ ಎಂದು ಹೇಳಿದ್ದಾರೆ. ಆದ್ರೆ ಕುಮಾರಸ್ವಾಮಿ ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡಿದ್ರು. ಎಲ್ಲರನ್ನೂ ಕತ್ತಲಲ್ಲಿ ಇರಿಸ್ತೀರಿ ಎಂದವರು ಕಂಬದಿಂದ ಹೆಚ್ಚು ಬೆಳಕು ತಗೊಳೋದು ಎಷ್ಟು ಸರಿ ಎಂದು ಕೇಳಿದರು.
ಜೆಡಿಎಸ್ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಪ್ರಶ್ನೆಗೆ, ನಮ್ಮ ತತ್ವ ಸಿದ್ದಾಂತ ಒಪ್ಪಿಕೊಂಡು ಯಾರು ಬೇಕಾದರೂ ಕಾಂಗ್ರೆಸ್ ಗೆ ಬರಬಹುದು. ಎಂಪಿ ಎಲೆಕ್ಷನ್ ಹತ್ರ ಬರ್ಲಿ ಬಿಜೆಪಿ, ಜೆಡಿಎಸ್ ಮನೆ ಖಾಲಿ ಆಗುತ್ತೆ. ಯಾರು ಅಲ್ಲಿ ರಕ್ಷಣೆ ಕೊಡ್ತಿದ್ದಾರೆ, ಅಲ್ಲಿ ಯಾರೂ ಇಲ್ಲ. ಲೀಡರ್ ಇಲ್ಲ ಅಂತಾನೆ ನಾಯಕತ್ವ ಹುಡುಕಿಕೊಂಡು ಬರ್ತಾ ಇದ್ದಾರೆ ಎಂದು ವ್ಯಂಗ್ಯವಾಡಿದರು ಖರ್ಗೆ.
The BJP still does not know why Yediyurappa was removed from the chief minister's post in tears. Now that Vijayendra has come, he can give the information. There is no coordination in the BJP, there is a lack of leadership. Minister Priyank Kharge said vijayendra has been given the post.
25-04-25 07:32 pm
Bangalore Correspondent
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
26-04-25 08:21 pm
HK News Desk
Iran Blast: ಇರಾನ್ ಬಂದರಿನಲ್ಲಿ ಭಯಾನಕ ಸ್ಫೋಟ ; 4...
26-04-25 07:46 pm
Terror attack, Pak News: ಭಯೋತ್ಪಾದಕ ಸಂಘಟನೆಗಳಿಗ...
26-04-25 04:36 pm
Indus Water To Pak: ಪಹಲ್ಗಾಮ್ ಉಗ್ರರ ದಾಳಿ ; ಪಾಕ...
26-04-25 02:00 pm
Gokarna Beach, Drowning, Mbbs: ಗೋಕರ್ಣ ಸಮುದ್ರದ...
25-04-25 06:37 pm
26-04-25 08:03 pm
Mangalore Correspondent
NIA, PFI, DGP OM Prakash, Anupama Shenoy, Man...
26-04-25 07:11 pm
KMF Mangalore, Elections 2025: ಕೆಎಂಎಫ್ ಚುನಾವಣ...
25-04-25 10:49 pm
Bhatkal News, Pakistani Origin Mangalore: ಭಟ್...
25-04-25 07:43 pm
Mangalore News, Facebook post, Pahalgam Terro...
24-04-25 11:08 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm