ಬ್ರೇಕಿಂಗ್ ನ್ಯೂಸ್
17-11-23 01:37 pm Udupi Correspondent ಕರಾವಳಿ
ಉಡುಪಿ, ನ.17: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಕೃತ್ಯವನ್ನು ಸಂಭ್ರಮಿಸಿ ಪೋಸ್ಟ್ ಹಾಕಲಾಗಿದ್ದು ಈ ಕುರಿತು ಇನ್ಸ್ ಟಾ ಗ್ರಾಮ್ ಪೇಜ್ ವಿರುದ್ದ ಉಡುಪಿ ಸೈಬರಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನವೆಂಬರ್ 12 ರಂದು ಮಹಾರಾಷ್ಟ್ರ ಮೂಲದ ಆರೋಪಿ ಪ್ರವೀಣ್ ಚೌಗುಲೆ ಎಂಬಾತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕೃತ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಕೃತ್ಯ ನಡೆದ ಮೂರೇ ದಿನಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಈ ನಡುವೆ, ಕಿಡಿಗೇಡಿಗಳು ಈ ಹತ್ಯಾಕಾಂಡವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿ ಪೋಸ್ಟ್ ಮಾಡುತ್ತಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ‘ಹಿಂದು ಮಂತ್ರ’ ಎಂಬ ಪೇಜ್ನಲ್ಲಿ ಕೊಲೆ ಆರೋಪಿಯನ್ನು ಸಾಧನೆ ಮಾಡಿರುವಂತೆ ಬಿಂಬಿಸಿ ಪೋಸ್ಟ್ ಹಾಕಲಾಗಿದೆ. ‘ಹಿಂದು ಮಂತ್ರ’ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, ‘‘15 ನಿಮಿಷದಲ್ಲಿ 4 ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ’’ ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಫೋಟೋಗೆ ‘ಕಿರೀಟ’ ತೊಡಿಸಿ ವಿಕೃತಿ ಮೆರೆಯಲಾಗಿದೆ.

ತಮ್ಮ ಕೃತ್ಯಕ್ಕೂ ಸಮರ್ಥನೆ ನೀಡಿರುವ ಕಿಡಿಗೇಡಿಗಳು ‘ಉಡುಪಿ ಹುಡುಗಿಯರ ವಿಚಾರದಲ್ಲಿ ಯಾರೂ ಬಂದಿಲ್ಲ. ಆದ್ದರಿಂದ, ನಾವೂ ಈ ವಿಚಾರಕ್ಕೆ ಬರುವುದಿಲ್ಲ’ ಎಂದು ಬರೆಯಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇದಲ್ಲದೆ ಈ ‘ಹಿಂದು ಮಂತ್ರ’ ಇನ್ಸ್ಟಾಗ್ರಾಂ ಖಾತೆಯಲ್ಲಿ ಮುಸ್ಲಿಮ್ ಮಹಿಳೆಯರನ್ನು ಅವಹೇಳನ ಮಾಡುವ ರೀತಿಯ ಫೋಟೊ, ವಿಡಿಯೋಗಳನ್ನು ಹಂಚಿಕೊಂಡು ಶಾಂತಿ ಕದಡಲು ಯತ್ನಿಸಿದ ಹಲವು ಪೋಸ್ಟ್ಗಳನ್ನು ಹಾಕಲಾಗಿದೆ.
Udupi murder case, Instagram page Hindu Mantra celebrates murder, case filed at cyber crime.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm