ಬ್ರೇಕಿಂಗ್ ನ್ಯೂಸ್
17-11-23 04:24 pm Udupi Correspondent ಕರಾವಳಿ
ಉಡುಪಿ, ನ.17: ಒಂದೇ ಕುಟುಂಬದ ತಾಯಿ, ಮಕ್ಕಳು ಕೊಲೆಗೀಡಾದ ಮನೆಗೆ ನೇಜಾರಿನ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದು ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಕುಟುಂಬದ ಜೊತೆಗೆ ಸರಕಾರ ಇದೆಯೆಂದು ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊಲೆ ಮಾಡಿದ ಆರೋಪಿಯನ್ನು ನೋಡಿದರೆ ಸೈಕೋ ಕಿಲ್ಲರ್ ರೀತಿ ಇದ್ದಾನೆ. ಸೈಕೋ ರೀತಿ ಬಂದು ನಾಲ್ವರನ್ನು ಕೊಲೆ ಮಾಡಿ ಹೋಗಿದ್ದಾನೆ. ಉಡುಪಿ ಶಾಂತಿ ಪ್ರಿಯ ಜಿಲ್ಲೆಯಾಗಿದ್ದು, ಇಲ್ಲಿ ಈ ರೀತಿಯ ಘಟನೆ ನಡೆಯಬಾರದಿತ್ತು ಎಂದು ಹೇಳಿದ್ದಾರೆ.
ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಂದ ವ್ಯಕ್ತಿ ರಾಕ್ಷಸ ಕೃತ್ಯ ಎಸಗಿದ್ದಾನೆ. ಮೃತರ ಕುಟುಂಬದ ಜೊತೆ ಸರಕಾರ ಇದ್ದು, ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ಆರೋಪಿಯನ್ನು ತ್ವರಿತವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಮಾಡುತ್ತೇನೆ ಎಂದರು.


ಪ್ರದೇಶದಲ್ಲಿ ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಜೊತೆ ಮಾತನಾಡುತ್ತೇನೆ ಎಂದವರು ತಿಳಿಸಿದರು. ಇದೇ ವೇಳೆ, ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರಕಾರದಿಂದ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿದೆಯೋ ಅದನ್ನು ಮಾಡಲಾಗುವುದು ಎಂದು ಸಚಿವರು ಹೇಳಿದರು.
Udupi murder case, Lakshmi Hebbalkar in charge Minister visits family gives condolences. She met Noor Mohammed, the head of the family and his son Assad and other family members at their residence in Nejar. Hebbalkar The minister offered condolences to the family of Noor Mohammad. Local Congress leaders were present.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am