ಬ್ರೇಕಿಂಗ್ ನ್ಯೂಸ್
18-11-23 01:29 pm Mangalore Correspondent ಕರಾವಳಿ
ಸುಳ್ಯ, ನ.18: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಬರೆದು ಜಾಲತಾಣದಲ್ಲಿ ಹಂಚಿರುವುದು ಹಾಗೂ ಗರ್ಭಗುಡಿಯ ಫೋಟೊ ತೆಗೆದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ಪೊಲೀಸರಿಗೆ ದೂರು ನೀಡಿದ್ದಾರೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭಗುಡಿಯ ಫೋಟೋ ತೆಗೆದಿದ್ದಾರೆ. ಅಲ್ಲದೆ, ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ ಅರ್ಚಕರು, ಪುರೋಹಿತರನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳನ್ನು, ನಿಂದನಾತ್ಮಕವಾಗಿ ಬರೆದು ಇಲ್ಲಿನ ಅರ್ಚಕರನ್ನು ತೇಜೋವಧೆ ಮಾಡುವ ಬರಹಗಳನ್ನು ಬರೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ತುಪ್ಪ ಕಳವು ಆಗುತ್ತಿದೆಯೆಂಬ ಆರೋಪ
ದೇವಸ್ಥಾನದಲ್ಲಿ ತುಪ್ಪ ಕಳವಾಗುತ್ತಿರುವ ಬಗ್ಗೆ ಮೂರು ಬಾರಿ ದೂರು ಕೊಟ್ಟರೂ ಕಮಿಷನ್ ಆಸೆಯಿಂದ ಕಾರ್ಯ ನಿರ್ವಹಣಾಧಿಕಾರಿ ಪೊಲೀಸರಿಗೆ ದೂರು ನೀಡಿಲ್ಲ, ಕದ್ದ ತುಪ್ಪದಲ್ಲಿ ಅವರಿಗೂ ಪಾಲು ಇರಬಹುದು ಎಂಬ ಬರಹಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ದೇಗುಲದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಂಗಯ್ಯ ಪ್ರತಿಕ್ರಿಯಿಸಿದ್ದು, ವಾಟ್ಸಪ್ ನಲ್ಲಿ ಹರಿದಾಡಿದ ವಿಚಾರ ನನ್ನ ಗಮನಕ್ಕೂ ಬಂದಿದೆ, ನಮ್ಮ ಆಡಳಿತ ಸಮಿತಿಯಿಂದಲೂ ದೂರು ನೀಡಲಾಗಿದೆ ಎಂದಿದ್ದಾರೆ.
A complaint has been registered at the Subrahmanya police station against a person for allegedly writing an abusive article about the priest of the Kukke Subrahmanya temple and sharing it on the internet and taking a photograph of the sanctum sanctorum.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm