ಬ್ರೇಕಿಂಗ್ ನ್ಯೂಸ್
18-11-23 06:14 pm Udupi Correspondent ಕರಾವಳಿ
ಉಡುಪಿ, ನ.18: ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಹಾಳು ಮಾಡುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂಥವರು ಸಚಿವರಾದರೆ ಹೀಗೆಯೇ ಆಗೋದು ಎಂದು ಬಿಜೆಪಿ ಮುಖಂಡ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪೀಕರ್ ಯುಟಿ ಖಾದರ್ ಘನತೆಯನ್ನು ಹಾಳು ಮಾಡಬೇಡಿ, ನಾವು ಮುಲ್ಲಾ ಎಂದು ಗೌರವ ನೀಡೋದಿಲ್ಲ. ಸ್ಪೀಕರ್ ಎಂಬ ಹುದ್ದೆಗೆ ಗೌರವ ನೀಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ಗೆ ಮಾತಿನಿಂದಲೇ ತಿವಿದಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಗೆ ಅಸಮಾಧಾನ ಇದೆಯೇ ಎಂದು ಕೇಳಿದ ಪ್ರಶ್ನೆಗೆ, ನಾನು ರಾಜ್ಯಾಧ್ಯಕ್ಷ ಹುದ್ದೆಯ ರೇಸ್ನಲ್ಲಿ ಇಲ್ಲ ಎಂದು ಮೂರು ತಿಂಗಳ ಹಿಂದೆಯೇ ಸ್ಪಷ್ಟಪಡಿಸಿದ್ದೆ. ರೇಸಲ್ಲೇ ಇಲ್ಲ ಅಂದ ಮೇಲೆ ಬೇಸರದ ಪ್ರಶ್ನೆ ಬರಲ್ಲ. ಜವಾಬ್ದಾರಿ ಯಾವಾಗ ಯಾರಿಗೆ ಕೊಡಬೇಕು ಎಂದು ವರಿಷ್ಠರು ತೀರ್ಮಾನಿಸುತ್ತಾರೆ. ನಾವೆಲ್ಲರೂ ತಂಡವಾಗಿ ಕೆಲಸ ಮಾಡುತ್ತೇವೆ, ಹುದ್ದೆಯ ಬಗ್ಗೆ ಚರ್ಚೆ ಮಾಡಲು ಬಯಸಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಕರ ಆಯ್ಕೆಯಲ್ಲಿ ಯಾವ ಭಾಗ ಎಂಬುದು ಬರಲ್ಲ. ಉತ್ತರ ಕರ್ನಾಟಕದವರಾದ ಬೊಮ್ಮಾಯಿ ಎರಡು ವರ್ಷ ಸಿಎಂ ಆಗಿದ್ದರು. ವಿಪಕ್ಷ ನಾಯಕನ, ರಾಜ್ಯಾಧ್ಯಕ್ಷರ ಆಯ್ಕೆ ಸಮಗ್ರ ಕರ್ನಾಟಕಕ್ಕೆ ನಡೆದ ಆಯ್ಕೆಯಾಗಿದೆ. ರಾಜ್ಯ ಬಿಜೆಪಿಗೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ಅಶೋಕ ಸಮರ್ಥ ವಿಪಕ್ಷ ನಾಯಕನಾಗಿ ಎಲ್ಲಾ ಟೀಕೆಗೆ ಉತ್ತರಿಸುತ್ತಾರೆ. ನಮ್ಮ ಕೇಂದ್ರ ನಾಯಕರಾದ ನಿರ್ಮಲಾ ಸೀತಾರಾಮನ್, ದುಷ್ಯಂತ್ ಕುಮಾರ್ ನಮ್ಮೆಲ್ಲರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ನಮ್ಮೆಲ್ಲ ಶಾಸಕರ ಜೊತೆ ಮಾತನಾಡಿ ನಿರ್ಣಯ ಮಾಡಿದ್ದಾರೆ ಎಂದು ಸಿಟಿ ರವಿ ಹೇಳಿದರು.
Zameer ahmed Muslim Speaker Remark Triggers Controversy, Ct Ravi slams statement.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm