ಬ್ರೇಕಿಂಗ್ ನ್ಯೂಸ್
23-11-23 06:15 pm Mangalore Correspondent ಕರಾವಳಿ
ಮಂಗಳೂರು, ನ.23: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರ ಅಧೀನಕ್ಕೆ ಒಳಪಡಿಸುವಂತೆ ರಾಜ್ಯ ಸರಕಾರವು ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಎಸ್.ಆರ್ ಹರೀಶ್ ಆಚಾರ್ಯ ಅಗ್ರಹಿಸಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಈ ಹಿಂದಿನಂತೆಯೇ ಜಿಲಾಧಿಕಾರಿಯವರ ಅಧೀನದಲ್ಲಿಯೇ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕೆಂದು ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ( ಪದವಿ ಪೂರ್ವ) ಇಲಾಖೆ ಎಂದು ಬದಲಾಯಿಸಿ ಪ್ರೌಢ ಶಾಲಾ ವಿಭಾಗದಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಗೆ ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗವನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಲಾಗಿದೆ. ಈ ಮೂಲಕ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನೇ ರಾಜ್ಯ ಸರಕಾರ ಕಡೆಗಣಿಸುತ್ತಿದೆ. ಇದು ರಾಜ್ಯ ಸರಕಾರದ ಖಂಡನೀಯ ನಡೆಯಾಗಿದೆ. ಇದರಿಂದ ಪದವಿ ಪೂರ್ವ ಕಾಲೇಜಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಶೈಕ್ಷಣಿಕ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳು ಏಕಪಕ್ಷೀಯವಾಗಿ ನಡೆಯಬಾರದು. ಅದು ಎಲ್ಲರನ್ನೂ ಒಳ್ಳಗೊಂಡು ಸರ್ವ ಸಮ್ಮತದಿಂದ ಕೂಡಿರಬೇಕು. ಈ ಹಿನ್ನೆಲೆಯಲ್ಲಿ ಅದನ್ನು ಒಳಗೊಳ್ಳುವ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಸಮನ್ವಯ ಸಾಧಿಸಿಕೊಂಡು ಮಾಡಬೇಕಾಗಿದೆ. ಆದುದರಿಂದ ರಾಜ್ಯ ಸರಕಾರವು ತಕ್ಷಣವೇ ಈ ಬಗ್ಗೆ ತೆಗೆದುಕೊಂಡ ಎಲ್ಲಾ ಪ್ರಕ್ರಿಯಗಳನ್ನು ನಿಲ್ಲಿಸಿ ತಕ್ಷಣವೇ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಪ್ರತಿನಿಧಿಗಳು, ಉಪನ್ಯಾಸಕರ ಸಂಘದ ಪ್ರತಿನಿಧಿಗಳು ಮತ್ತು ಶಿಕ್ಷಣ ತಜ್ಞರ ಸಭೆಯನ್ನು ಕರೆದು ಚರ್ಚಿಸಿ ಒಮ್ಮತದಿಂದ ತೀರ್ಮಾನಿಸಲು ಕ್ರಮ ಕೈಗೊಳ್ಳಬೇಕೆಂದು ಹರೀಶ್ ಆಚಾರ್ಯ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.
Mangalore University Former syndicate member S R Harish Acharya requests for post graduation education department to be under GIP.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm