ಬ್ರೇಕಿಂಗ್ ನ್ಯೂಸ್
23-11-23 06:15 pm Mangalore Correspondent ಕರಾವಳಿ
ಮಂಗಳೂರು, ನ.23: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರ ಅಧೀನಕ್ಕೆ ಒಳಪಡಿಸುವಂತೆ ರಾಜ್ಯ ಸರಕಾರವು ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಎಸ್.ಆರ್ ಹರೀಶ್ ಆಚಾರ್ಯ ಅಗ್ರಹಿಸಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಈ ಹಿಂದಿನಂತೆಯೇ ಜಿಲಾಧಿಕಾರಿಯವರ ಅಧೀನದಲ್ಲಿಯೇ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕೆಂದು ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ( ಪದವಿ ಪೂರ್ವ) ಇಲಾಖೆ ಎಂದು ಬದಲಾಯಿಸಿ ಪ್ರೌಢ ಶಾಲಾ ವಿಭಾಗದಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಗೆ ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗವನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಲಾಗಿದೆ. ಈ ಮೂಲಕ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನೇ ರಾಜ್ಯ ಸರಕಾರ ಕಡೆಗಣಿಸುತ್ತಿದೆ. ಇದು ರಾಜ್ಯ ಸರಕಾರದ ಖಂಡನೀಯ ನಡೆಯಾಗಿದೆ. ಇದರಿಂದ ಪದವಿ ಪೂರ್ವ ಕಾಲೇಜಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಶೈಕ್ಷಣಿಕ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳು ಏಕಪಕ್ಷೀಯವಾಗಿ ನಡೆಯಬಾರದು. ಅದು ಎಲ್ಲರನ್ನೂ ಒಳ್ಳಗೊಂಡು ಸರ್ವ ಸಮ್ಮತದಿಂದ ಕೂಡಿರಬೇಕು. ಈ ಹಿನ್ನೆಲೆಯಲ್ಲಿ ಅದನ್ನು ಒಳಗೊಳ್ಳುವ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಸಮನ್ವಯ ಸಾಧಿಸಿಕೊಂಡು ಮಾಡಬೇಕಾಗಿದೆ. ಆದುದರಿಂದ ರಾಜ್ಯ ಸರಕಾರವು ತಕ್ಷಣವೇ ಈ ಬಗ್ಗೆ ತೆಗೆದುಕೊಂಡ ಎಲ್ಲಾ ಪ್ರಕ್ರಿಯಗಳನ್ನು ನಿಲ್ಲಿಸಿ ತಕ್ಷಣವೇ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಪ್ರತಿನಿಧಿಗಳು, ಉಪನ್ಯಾಸಕರ ಸಂಘದ ಪ್ರತಿನಿಧಿಗಳು ಮತ್ತು ಶಿಕ್ಷಣ ತಜ್ಞರ ಸಭೆಯನ್ನು ಕರೆದು ಚರ್ಚಿಸಿ ಒಮ್ಮತದಿಂದ ತೀರ್ಮಾನಿಸಲು ಕ್ರಮ ಕೈಗೊಳ್ಳಬೇಕೆಂದು ಹರೀಶ್ ಆಚಾರ್ಯ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.
Mangalore University Former syndicate member S R Harish Acharya requests for post graduation education department to be under GIP.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm