ಬ್ರೇಕಿಂಗ್ ನ್ಯೂಸ್
24-11-23 02:56 pm Mangalore Correspondent ಕರಾವಳಿ
ಮಂಗಳೂರು, ನ.24: ಡಿಸಿಎಂ ಡಿಕೆ ಶಿವಕುಮಾರ್ ಮೇಲಿನ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದ ವಾಪಸ್ ಪಡೆದ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಮಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಅಡ್ವೊಕೇಟ್ ಜನರಲ್ ಗೆ ಕಳೆದ ಬಾರಿ ಯಡಿಯೂರಪ್ಪ ಸರ್ಕಾರ ಇದ್ದಾಗ ಮೌಖಿಕ ಆದೇಶ ಕೊಟ್ಟಿದ್ದರು. ಮೌಖಿಕ ಆದೇಶ ಕೊಡೋದು ತಪ್ಪು ಅನ್ನೋದು ಆಗಿನ ಎಜಿ ಮತ್ತು ಈಗಿನ ಎಜಿ ಶಶಿಕಿರಣ್ ಶೆಟ್ಟಿ ಅಭಿಪ್ರಾಯ. ಆ ಪ್ರಕಾರ ಈಗ ಕೊಟ್ಟ ಅನುಮತಿಯನ್ನು ವಾಪಾಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಸಿಬಿಐ ಸುಪ್ರೀಂ ಅಥವಾ ಹೈಕೋರ್ಟ್ ಹೋಗೋದು ಅವರಿಗೆ ಬಿಟ್ಟಿದ್ದು. ಆಗಿನ ಸರ್ಕಾರ ಮಾಡಿರೋದು ತಪ್ಪು ಅಂತ ಎಜಿ ವರದಿ ಕೊಟ್ಟಿದ್ದಾರೆ. ಹೀಗಾಗಿ ಕ್ಯಾಬಿನೆಟ್ ಗೂ ಅದು ತಪ್ಪು ಅಂತ ಅನಿಸಿ ವಾಪಸ್ ತೆಗೊಂಡಿದೆ. ಬಿಜೆಪಿಯವರು ಪ್ರಾಮಾಣಿಕರಾಗಿದ್ದರೆ ಎಜಿ ಅಭಿಪ್ರಾಯ ಕೇಳಿ ತನಿಖೆಗೆ ಕೊಡಬೇಕಿತ್ತು. ಎಜಿ ಅಭಿಪ್ರಾಯ ಕೊಡುವ ಮೊದಲೇ ಆಗಿನ ಸಿಎಂ ಸಿಬಿಐ ಕೊಟ್ಟಿದ್ದು ತಪ್ಪಲ್ವಾ? ಅವರು ಪ್ರಾಮಾಣಿಕರಾಗಿದ್ರೆ ಎಜಿ ಕೇಳಿ ಕೊಡಬೇಕಿತ್ತು.
ನಮ್ಮ ಪ್ರಾಮಾಣಿಕತೆ ಪ್ರಶ್ನೆ ಮಾಡೋ ಇವರು ಎಜಿ ಸಲಹೆ ಕೇಳಬೇಕಿತ್ತು. ಈಗಿನ ಎಜಿ ಅದು ತಪ್ಪು ಅಂದ ಕಾರಣಕ್ಕೆ ಕ್ಯಾಬಿನೆಟ್ ನಿರ್ಧಾರ ತೆಗೆದುಕೊಂಡಿದೆ ಎಂದರು.
ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ, ಕಾಂಗ್ರೆಸ್ ಗೆ ಯಾರು ಬರ್ತಾರೆ, ಹೋಗ್ತಾರೆ ಅಂತ ನನಗೆ ಗೊತ್ತಿಲ್ಲ. ವಿಜಯೇಂದ್ರ ಅಥವಾ ಯಾವುದೇ ವ್ಯಕ್ತಿಯಿಂದ ಪಕ್ಷದಲ್ಲಿ ಬದಲಾವಣೆ ಆಗಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬರೋರ ಸಂಖ್ಯೆ ಹೆಚ್ಚಾಗಲಿದೆ, ಸರ್ಕಾರ ಸರಿಯಾದ ದಾರಿಯಲ್ಲಿದೆ. ಸೋಮಣ್ಣ ವಿಚಾರದಲ್ಲಿ ಮಾತುಕತೆ ಆಗ್ತಿದೆ, ಏನಾಗಿದೆ ಗೊತ್ತಿಲ್ಲ ಎಂದರು.
ಜಾತಿ ಗಣತಿ ಅನ್ನೋದು ಯಾರದ್ದೇ ಜಾತಿ ಎತ್ತಿ ತೋರಿಸೋ ಉದ್ದೇಶ ಅಲ್ಲ. ಆಯಾ ಜಾತಿಗಳ ಆರ್ಥಿಕ ಸ್ಥಿತಿಗತಿ ತಿಳಿಯೋ ಉದ್ದೇಶ. ಅವರನ್ನು ಮೇಲೆ ಎತ್ತೋದೇ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಸಮಾಜದಲ್ಲಿ ಮೇಲೆ ಎತ್ತೋ ಉದ್ದೇಶ ಜಾತಿ ಗಣತಿಯದ್ದು. ಸಿಎಂ, ಡಿಸಿಎಂ ಮಧ್ಯೆ ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಜಾತಿ ಗಣತಿ ವರದಿ ತೆಗೊಂಡು ಸಾಧಕ ಬಾಧಕ ನೋಡಿ ಸರ್ಕಾರ ಅನುಮೋದನೆ ನೀಡಲಿದೆ ಎಂದರು.
Urban Development Minister Byrathi Suresh has reacted to the cabinet's decision to withdraw from the CBI probe into the disproportionate assets case against Deputy Chief Minister DK Shivakumar. He had given an oral order to the Advocate General in this regard last time when the Yediyurappa government was in power.
25-04-25 07:32 pm
Bangalore Correspondent
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
26-04-25 02:00 pm
HK News Desk
Gokarna Beach, Drowning, Mbbs: ಗೋಕರ್ಣ ಸಮುದ್ರದ...
25-04-25 06:37 pm
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
25-04-25 10:49 pm
Giridhar Shetty, Mangalore Correspondent
Bhatkal News, Pakistani Origin Mangalore: ಭಟ್...
25-04-25 07:43 pm
Mangalore News, Facebook post, Pahalgam Terro...
24-04-25 11:08 pm
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm