ಬ್ರೇಕಿಂಗ್ ನ್ಯೂಸ್
15-11-20 11:43 am Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 15: ಡೆಲಿವರಿ ಕೆಲಸ ಮಾಡುತ್ತಿದ್ದ ಯುವಕನನ್ನು ಅಡ್ಡಗಟ್ಟಿ ತಲೆಗೆ ಹೊಡೆದು ಹಲ್ಲೆಗೈದು ಆತನ ಕೈಯಲ್ಲಿದ್ದ 15 ಸಾವಿರ ಹಣ ದರೋಡೆಗೈದ ಘಟನೆ ನಡೆದಿದ್ದು ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ಕುಲಶೇಖರ ನಿವಾಸಿ ಮಂಜುನಾಥ (24) ಆಸ್ಪತ್ರೆಗೆ ದಾಖಲಾಗಿದ್ದಾನೆ. ರಾತ್ರಿ 11 ಗಂಟೆ ವೇಳೆಗೆ ಕುದ್ರೋಳಿಯಲ್ಲಿ ಘಟನೆ ನಡೆದಿದೆ. ಕಂಕನಾಡಿಯ ಸಿಟಿ ಗೋಲ್ಡ್ ಬಳಿಯ ಬಿಲ್ಡಿಂಗ್ ನಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಮತ್ತು ಹೂವಿನ ಬುಕ್ಕೆ ಆರ್ಡರ್ ಇತ್ತು. ಅದರಂತೆ ಮಂಜುನಾಥ್, ಕುದ್ರೋಳಿಯಿಂದ ಕೇಕ್ ಮತ್ತು ಹೂವಿನ ಬುಕ್ಕೆ ಪಡೆದು ಸ್ಕೂಟರಿನಲ್ಲಿ ಬರುತ್ತಿದ್ದಾಗ ಕುದ್ರೋಳಿ ಮಸೀದಿ ಬಳಿ, ಇರ್ಫಾನ್ ಅಳಕೆ ಮತ್ತು ಫಹಾದ್ ಕುದ್ರೋಳಿ ಎಂಬ ಇಬ್ಬರು ಯುವಕರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ತಲೆಗೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಮುಂದಕ್ಕೆ ಈ ಕಡೆಗೆ ಬಂದರೆ ಜೀವ ಸಹಿತ ಬಿಡಲ್ಲ ಎಂದು ನೆಲಕ್ಕೆ ಹಾಕಿ ಕಾಲಿನಲ್ಲಿ ತುಳಿದಿದ್ದಾರೆ. ಇದರಿಂದ ಬೆದರಿದ ಮಂಜುನಾಥ್, ಸ್ಕೂಟರನ್ನು ಬಿಟ್ಟು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಗ್ರಾಹಕರಿಂದ ಪಡೆದಿದ್ದ 15 ಸಾವಿರ ಹಣ ಸ್ಕೂಟರಿನಲ್ಲಿತ್ತು. ಅದನ್ನು ಆರೋಪಿಗಳು ಕಿತ್ತುಕೊಂಡಿದ್ದಾರೆ ಎಂದು ಬಂದರು ಠಾಣೆಯಲ್ಲಿ ಮಂಜುನಾಥ್ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.


ನ.6ರಂದು ಘಟನೆ ನಡೆದರೂ, ಪೊಲೀಸರು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಮಂಜುನಾಥ್ ದೂರಿದ್ದಾನೆ. ರಾತ್ರಿ ವೇಳೆ ಯುವಕನ ಅಡ್ಡಗಟ್ಟಿ ದರೋಡೆ ನಡೆಸಿದ್ರೂ ಆರೋಪಿಗಳ ಗುರುತು ಹೇಳಿದ್ದರೂ ಪೊಲೀಸರು ಬಂಧಿಸದೆ ಮೀನ ಮೇಷ ಎಣಿಸುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ.
Miscreants attack Delivery boy with a soda bottle in Kudroli, Mangalore by looting 15,000 Rs Cash. Though the case has been registered at Bunder Police station yet the culprits are not been arrested by the police.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm