ಬ್ರೇಕಿಂಗ್ ನ್ಯೂಸ್
15-11-20 11:43 am Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 15: ಡೆಲಿವರಿ ಕೆಲಸ ಮಾಡುತ್ತಿದ್ದ ಯುವಕನನ್ನು ಅಡ್ಡಗಟ್ಟಿ ತಲೆಗೆ ಹೊಡೆದು ಹಲ್ಲೆಗೈದು ಆತನ ಕೈಯಲ್ಲಿದ್ದ 15 ಸಾವಿರ ಹಣ ದರೋಡೆಗೈದ ಘಟನೆ ನಡೆದಿದ್ದು ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ಕುಲಶೇಖರ ನಿವಾಸಿ ಮಂಜುನಾಥ (24) ಆಸ್ಪತ್ರೆಗೆ ದಾಖಲಾಗಿದ್ದಾನೆ. ರಾತ್ರಿ 11 ಗಂಟೆ ವೇಳೆಗೆ ಕುದ್ರೋಳಿಯಲ್ಲಿ ಘಟನೆ ನಡೆದಿದೆ. ಕಂಕನಾಡಿಯ ಸಿಟಿ ಗೋಲ್ಡ್ ಬಳಿಯ ಬಿಲ್ಡಿಂಗ್ ನಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಮತ್ತು ಹೂವಿನ ಬುಕ್ಕೆ ಆರ್ಡರ್ ಇತ್ತು. ಅದರಂತೆ ಮಂಜುನಾಥ್, ಕುದ್ರೋಳಿಯಿಂದ ಕೇಕ್ ಮತ್ತು ಹೂವಿನ ಬುಕ್ಕೆ ಪಡೆದು ಸ್ಕೂಟರಿನಲ್ಲಿ ಬರುತ್ತಿದ್ದಾಗ ಕುದ್ರೋಳಿ ಮಸೀದಿ ಬಳಿ, ಇರ್ಫಾನ್ ಅಳಕೆ ಮತ್ತು ಫಹಾದ್ ಕುದ್ರೋಳಿ ಎಂಬ ಇಬ್ಬರು ಯುವಕರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ತಲೆಗೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಮುಂದಕ್ಕೆ ಈ ಕಡೆಗೆ ಬಂದರೆ ಜೀವ ಸಹಿತ ಬಿಡಲ್ಲ ಎಂದು ನೆಲಕ್ಕೆ ಹಾಕಿ ಕಾಲಿನಲ್ಲಿ ತುಳಿದಿದ್ದಾರೆ. ಇದರಿಂದ ಬೆದರಿದ ಮಂಜುನಾಥ್, ಸ್ಕೂಟರನ್ನು ಬಿಟ್ಟು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಗ್ರಾಹಕರಿಂದ ಪಡೆದಿದ್ದ 15 ಸಾವಿರ ಹಣ ಸ್ಕೂಟರಿನಲ್ಲಿತ್ತು. ಅದನ್ನು ಆರೋಪಿಗಳು ಕಿತ್ತುಕೊಂಡಿದ್ದಾರೆ ಎಂದು ಬಂದರು ಠಾಣೆಯಲ್ಲಿ ಮಂಜುನಾಥ್ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.


ನ.6ರಂದು ಘಟನೆ ನಡೆದರೂ, ಪೊಲೀಸರು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಮಂಜುನಾಥ್ ದೂರಿದ್ದಾನೆ. ರಾತ್ರಿ ವೇಳೆ ಯುವಕನ ಅಡ್ಡಗಟ್ಟಿ ದರೋಡೆ ನಡೆಸಿದ್ರೂ ಆರೋಪಿಗಳ ಗುರುತು ಹೇಳಿದ್ದರೂ ಪೊಲೀಸರು ಬಂಧಿಸದೆ ಮೀನ ಮೇಷ ಎಣಿಸುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ.
Miscreants attack Delivery boy with a soda bottle in Kudroli, Mangalore by looting 15,000 Rs Cash. Though the case has been registered at Bunder Police station yet the culprits are not been arrested by the police.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm