ಬ್ರೇಕಿಂಗ್ ನ್ಯೂಸ್
24-11-23 10:57 pm Mangalore Correspondent ಕರಾವಳಿ
ಉಳ್ಳಾಲ, ನ.24: ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟವು ತನಿಖೆಗೆ ಕೊಟ್ಟ ಅನುಮತಿಯನ್ನ ಹಿಂಪಡೆದದ್ದು ಖಂಡನೀಯ. ಸ್ಪೀಕರ್ ಕುರ್ಚಿಗೂ ಧರ್ಮ ಲೇಪನ ನೀಡಿರುವ ಸಚಿವ ಜಮೀರ್ ಅಹಮ್ಮದ್ ಅವರ ನಡೆಯ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಶ್ನಿಸಲಿದ್ದೇವೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮಂಗಳೂರು ಮಂಡಲ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೇಳಿಕೊಳ್ಳಲು ಆಶ್ಚರ್ಯ ಎನಿಸುವಂತಹ ಬಹಳ ನೋವಿನ ಸಂಗತಿ ನಡೆದಿದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ
ಸಿಬಿಐ ತನಿಖೆ ಮಾಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಿಬಿಐ ತನಿಖೆಗೆ ಕೊಟ್ಟ ಅನುಮತಿ ವಾಪಾಸು ತೆಗೆದುಕೊಂಡಿದೆ. ಯಾವುದೇ ರಾಗ ದ್ವೇಷಗಳಿಲ್ಲದೆ ಆಡಳಿತ ನಡೆಸುವುದಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಸಿಬಿಐ ತನಿಖೆಯನ್ನ ಹಿಂದೆಗೆಯುವ ಮೂಲಕ ಭ್ರಷ್ಟಾಚಾರ ಆರೋಪ ಹೊತ್ತ ಉಪ ಮುಖ್ಯ ಮಂತ್ರಿಯ ರಕ್ಷಣೆಗೆ ನಿಂತಿರುವುದು ಖೇದಕರ.

ತನಿಖೆ ಹಂತದಲ್ಲಿರುವ ಪ್ರಕರಣಗಳಲ್ಲಿ ಸರಕಾರ ಮೂಗು ತೂರಿಸಬಾರದು. ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರ ಕ್ರಿಮಿನಲ್ ಪ್ರಕರಣಗಳಿಗೆ ಸರ್ಕಾರ ಕೈ ಹಾಕಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದರೂ ಶಾಸನಬದ್ಧ ಸರಕಾರ ಸಚಿವ ಸಂಪುಟದ ಮೂಲಕ ತನಿಖೆಯನ್ನ ಹಿಂಪಡೆದದ್ದು ಸಿದ್ಧರಾಮಯ್ಯ ಸರಕಾರ ಭ್ರಷ್ಟಾಚಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತಿರುವುದನ್ನ ಜಗಜ್ಜಾಹೀರಾಗಿಸಿದೆ ಎಂದರು.
ಸಚಿವ ಜಮೀರ್ ಅಹ್ಮದ್ ಭಾಷಣವೊಂದರಲ್ಲಿ ಸ್ಪೀಕರ್ ಯು.ಟಿ. ಖಾದರ್ ಗೆ ಬಿಜೆಪಿಯವರೂ ಸಲಾಂ ಹೊಡೆಯುವಂತೆ ಮಾಡಿದ್ದೇವೆ ಎಂದು ಹೇಳಿರುವುದು ಪ್ರಜಾ ಪ್ರಭುತ್ವದ ಅಪಹಾಸ್ಯ ಮಾಡಿದಂತೆ. ಸಭಾಪತಿಗಳ ಕುರ್ಚಿಗೂ ಧರ್ಮದ ಲೇಪನ ನೀಡುವ ಜಮೀರ್ ರಾಜೀನಾಮೆ ಪಡೆಯುವ ತಾಕತ್ತು ಸಿದ್ಧರಾಮಯ್ಯರಿಗೆ ಇದೆಯೇ ಎಂದು ಕೋಟ ಪ್ರಶ್ನಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕಾರ್ಯದರ್ಶಿ ಸತೀಶ್ ಕುಂಪಲ ಮೊದಲಾದವರು ಪತ್ರಿಕಾ ಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Mangalore Kota Srinivas Poojary slams congress DCM Dk Shivakumar.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm