ಬ್ರೇಕಿಂಗ್ ನ್ಯೂಸ್
16-11-20 03:27 pm Mangaluru Correspondent ಕರಾವಳಿ
ಉಳ್ಳಾಲ: ನವೆಂಬರ್, 16: ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸ್ ನಲ್ಲಿರುವ ಶಿಥಿಲಗೊಂಡಿರುವ ಹಳೆಯ ವಸತಿ ಮತ್ತು ವಾಣಿಜ್ಯ ಕಟ್ಟಡದ ಬಾಡಿಗೆ ಮನೆಯೊಂದರಲ್ಲಿ ಬೆಂಕಿ ಅವಘಡ ನಡೆದಿದ್ದು ಮನೆಯಲ್ಲಿದ್ದ ಒಂಟಿ ವಿಧವೆಯ ನಗ, ನಗದು, ಬಟ್ಟೆಬರೆಗಳು ಸುಟ್ಟು ಕರಕಲಾಗಿವೆ.
ವಿದ್ಯಾ ಶೆಟ್ಟಿ ಎಂಬ ಒಂಟಿ ಮಹಿಳೆ ಕಳೆದ ಎಂಟು ವರ್ಷಗಳಿಂದ ಪಂಡಿತ್ ಹೌಸ್ನ ವಿಜಯಾ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಬಾಡಿಗೆ ವಾಸವಿದ್ದರೆನ್ನಲಾಗಿದೆ. ವಿದ್ಯಾ ಅವರು ನಗರದ ಕೆಎಮ್ ಸಿ ಆಸ್ಪತ್ರೆಯಲ್ಲಿ ಸಣ್ಣ ಉದ್ಯೋಗದಲ್ಲಿದ್ದು ಇಂದು ಬೆಳಗ್ಗೆ ಎಂದಿನಂತೆ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದು ಮಧ್ಯಾಹ್ನದ ಹೊತ್ತಿಗೆ ಮನೆಯೊಳಗೆ ಬೆಂಕಿ ಆಕಸ್ಮಿಕ ನಡೆದಿದ್ದು ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ನಡೆದಿರುವುದಾಗಿ ಶಂಕಿಸಲಾಗಿದೆ.




ಅಗ್ನಿ ಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ವಿದ್ಯಾ ಅವರು ಮನೆಯೊಳಗಿಟ್ಟಿದ್ದ 12,000 ರೂಪಾಯಿ ನಗದು ಸುಟ್ಟು ಹೋಗಿದ್ದು, ಟಿ.ವಿ. ಶೋಕೇಸ್ ಮೇಲಿಟ್ಟಿದ್ದ ಚಿನ್ನದ ಸರ, ಎರಡು ಉಂಗುರಗಳು ನಾಪತ್ತೆಯಾಗಿವೆ. ಮನೆಯೊಳಗಿನ ಕಪಾಟು, ಮಂಚ ಸಂಪೂರ್ಣ ಸುಟ್ಟು ಕರಕಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶಿಥಿಲ ಕಟ್ಟಡ, ಮಾಲಕನ ಅಮಾನುಷ ವರ್ತನೆ !
ಪಂಡಿತ್ ಹೌಸ್ ನಲ್ಲಿರುವ ವಿಜಯಾ ಕಾಂಪ್ಲೆಕ್ಸ್ ಕಟ್ಟಡ ಹಳೆಯದಾಗಿದ್ದು ಶಿಥಿಲಗೊಂಡಿದೆ. ವಿದ್ಯುತ್ ಸಂಪರ್ಕದ ತಂತಿಗಳು ಹಳೆಯದಾಗಿದ್ದು ನಾದುರಸ್ತಿ ಸ್ಥಿತಿಯಲ್ಲಿದೆ. ಘಟನೆಯಿಂದ ತನ್ನ ಸೊತ್ತನ್ನು ಕಳಕೊಂಡ ವಿದ್ಯಾ ಶೆಟ್ಟಿಯವರು ದುಃಖದಲ್ಲಿದ್ದು ಸ್ಥಳಕ್ಕಾಗಮಿಸಿದ ಕಟ್ಟಡ ಮಾಲಕ ವಿಧವೆಯ ವಿರುದ್ಧವೇ ಹರಿಹಾಯ್ದು ಮನೆ ಖಾಲಿ ಮಾಡುವಂತೆ ಮಾನವೀಯತೆ ಮರೆತು ವರ್ತಿಸಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ. ತೊಕ್ಕೊಟ್ಟು ಮತ್ತಿತರ ಕಡೆ ಬಾರ್ ಹೊಂದಿರುವ ಕಟ್ಟಡ ಮಾಲಕನ ಅಮಾನವೀಯತೆ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Fire breaks out at old building in Thokottu, Mangalore. The Building also had a house in which a widow was residing is said to be completely gutted by the fire accident.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am