ಬ್ರೇಕಿಂಗ್ ನ್ಯೂಸ್
01-12-23 06:33 pm Mangalore Correspondent ಕರಾವಳಿ
ಮಂಗಳೂರು, ಡಿ.1: ಗ್ರಾಮ ಪಂಚಾಯತ್ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಡಿ.1ರಂದು ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಬ್ರಹತ್ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ದ.ಕ. ಜಿಲ್ಲಾ ಗ್ರಾಮ ಪಂಚಾಯತ್ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಹೋರಾಟದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಸುಮಾರು 500ಕ್ಕೂ ಮಿಕ್ಕಿದ ಪ್ರತಿಭಟನಾಕಾರರು ಸೇರಿದ್ದರು.


ಪ್ರತಿಭಟನೆಯಲ್ಲಿ ಮಾತನಾಡಿದ ಕಾರ್ಮಿಕ ಮುಖಂಡ ಸುನಿಲ್ ಕುಮಾರ್ ಬಜಾಲ್, ಸರಕಾರದ ಎಲ್ಲಾ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಹಾಗೂ ಸರಕಾರದ ಪರವಾಗಿ ಬಹಳ ನಿಷ್ಠೆಯಿಂದ ದುಡಿಯುವ ಗ್ರಾಮ ಪಂಚಾಯತ್ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಕಳೆದ 5 ವರ್ಷಗಳಿಂದ ಪ್ರಾಮಾಣಿಕವಾಗಿ ದುಡಿಯುತ್ತಿದ್ದರೂ, ಸರಕಾರ ಮಾತ್ರ ಅವರ ಬಗ್ಗೆ ಎಳ್ಳಷ್ಟೂ ಕಾಳಜಿ ವಹಿಸುತ್ತಿಲ್ಲ. ಗೌರವ ಧನದ ಹೆಸರಿನಲ್ಲಿ 5000, 2500 ರೂ. ನೀಡಿ ದುಡಿಯುವ ಜನತೆಗೆ ಅಗೌರವ ತೋರಿಸುತ್ತಿದೆ. ವಿವಿಧ ರೀತಿಯ ಗ್ಯಾರಂಟಿಗಳನ್ನು ನೀಡುವ ರಾಜ್ಯ ಸರಕಾರ ದುಡಿಯುವ ಜನತೆಗೆ ಬದುಕುವ ಗ್ಯಾರಂಟಿ ನೀಡದಿರುವುದು ವಿಪರ್ಯಾಸ. ಇವರ ಬೇಡಿಕೆಗಳನ್ನು ಈಡೇರಿಸಲು ಸರಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೆರಾವ್ ಹಾಕಿ ಹೋರಾಟ ನಡೆಸಬೇಕಾದಿತು ಎಂದು ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.
ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಸೌಮ್ಯ ಯಶವಂತ ಮಾತನಾಡಿ, ಸರಕಾರದ ಎಲ್ಲಾ ಕೆಲಸಗಳನ್ನು ಮಾಡಿಸುವ ಸರಕಾರ ನಮ್ಮ ಹುದ್ದೆಗಳನ್ನು ಖಾಯಂಗೊಳಿಸಿ ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಮುಖ್ಯ ಪುಸ್ತಕ ಬರಹಗಾರರಿಗೆ ಮಾಸಿಕ ರೂ.20,000 ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಮಾಸಿಕ ರೂ.15,000 ವೇತನ ನೀಡಬೇಕು. ಅದರ ಜೊತೆಗೆ ESI, PF, ಸಮವಸ್ತ್ರ, ಗುರುತು ಚೀಟಿಗಳನ್ನು ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಸ್ಪಂದಿಸಬೇಕು ಎಂದು ಹೇಳಿದರು.
ಒಕ್ಕೂಟದ ಜಿಲ್ಲಾ ನಾಯಕಿ ಸಂಧ್ಯಾ ಪುತ್ತೂರು ಪ್ರಾಸ್ತಾವಿಕ ಮಾತನಾಡಿದರು. ಪ್ರತಿಭಟನೆಯ ನೇತೃತ್ವವನ್ನು ಒಕ್ಕೂಟದ ಮುಖಂಡರಾದ ಗೀತಾ ಸುಳ್ಯ, ಶೋಭಾ, ಇಂದಿರಾ, ಜಯಂತಿ, ಗೀತಾಂಜಲಿ ಮೂಡಬಿದ್ರೆ, ನಳಿನಾಕ್ಷಿ ಮುನ್ನೂರು ಮುಂತಾದವರು ವಹಿಸಿದ್ದರು. ಪ್ರತಿಭಟನೆಯ ಕೊನೆಯಲ್ಲಿ ಜಿಲ್ಲಾ ಮಟ್ಟದ ನಿಯೋಗ ದ.ಕ. ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಅರ್ಪಿಸಿತು.
Mangalore Protest by gram panchayat book writers, community resource persons; Gherao warning if the demand is not met.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm