ಬ್ರೇಕಿಂಗ್ ನ್ಯೂಸ್
02-12-23 03:36 pm Mangalore Correspondent ಕರಾವಳಿ
ಮಂಗಳೂರು, ಡಿ.2: ರಾಜ್ಯಾದ್ಯಂತ ಡಯಾಲಿಸ್ ವ್ಯವಸ್ಥೆಯಲ್ಲಿ ಸಮಸ್ಯೆ ಇದೆ. ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಡಯಾಲಿಸಿಸ್ ವ್ಯವಸ್ಥೆಯಲ್ಲಿ ಗೊಂದಲದ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಆರೋಗ್ಯ ಸಚಿವನಾಗಿ ಬರುವ ಮೊದಲೇ ಈ ಸಮಸ್ಯೆ ಇದೆ. ಹಿಂದಿನ ಸರ್ಕಾರ ಎರಡು ಏಜೆನ್ಸಿಗೆ ಗುತ್ತಿಗೆ ಕೊಟ್ಟಿತ್ತು. ಅದರಲ್ಲಿ ಒಬ್ಬರು ಅರ್ಧದಲ್ಲೇ ಬಿಟ್ಟಿದ್ದರು. ಏಜೆನ್ಸಿ ನಿರ್ವಹಣೆ ಸರಿಯಿರಲಿಲ್ಲ, ಸಿಬ್ಬಂದಿಗೆ ಸಂಬಳ ಸರಿಯಾಗಿ ಕೊಡ್ತಾ ಇರಲಿಲ್ಲ. ಅವರ ಇಎಸ್ ಐ, ಪಿಎಫ್ ಕಟ್ಟಿರಲಿಲ್ಲ, ರಾಜ್ಯ ಸರ್ಕಾರ ಕಟ್ಟಲು ನೋಡ್ತಾ ಇದೆ.
ಆದರೆ ಅದಕ್ಕೆ ಮೊದಲು ಆ ಏಜೆನ್ಸಿಯನ್ನು ಬ್ಲಾಕ್ ಲಿಸ್ಟ್ ಮಾಡೋ ಕೆಲಸ ಆಗ್ತಿದೆ. ಇದರ ಜೊತೆಗೆ ನಾಲ್ಕು ವಿಭಾಗದಲ್ಲಿ ಹೊಸ ಏಜೆನ್ಸಿಗಳಿಗೆ ಟೆಂಡರ್ ಪ್ರಕ್ರಿಯೆ ನಡೀತಾ ಇದೆ. ಡಯಾಲಿಸ್ ಮೆಷಿನ್ ಕೆಟ್ಟು ಹೋದ ಕಡೆ ಅದನ್ನ ಬದಲಾಯಿಸಲು ಆಗ್ತಿಲ್ಲ. ಈಗಿರೋ ಏಜೆನ್ಸಿ ಮಾಡಬೇಕು, ಅಥವಾ ಹೊಸ ಏಜೆನ್ಸಿ ಬಂದ ಬಳಿಕ ಮಾಡಬೇಕು. ಯಾವುದೂ ಆಗದೇ ಇದ್ದಲ್ಲಿ ಸರ್ಕಾರವೇ ನಿರ್ವಹಣೆ ಮಾಡೋ ಬಗ್ಗೆ ಚಿಂತನೆ ಇದೆ. ಸರ್ಕಾರವೇ ಮೆಷಿನ್ ಖರೀದಿಸಿ ನಿರ್ವಹಣೆ ಮಾಡಲು ಚಿಂತಿಸಿದೆ. ಟೆಂಡರ್ ಪ್ರಕ್ರಿಯೆ ಮುಗಿಯಲಿ, ಆ ಬಳಿಕ ನಿರ್ಧಾರ ಮಾಡೋಣ ಎಂದಿದ್ದಾರೆ.
ಡಯಾಲಿಸಸ್ ಸಿಬ್ಬಂದಿಯ ಬಗ್ಗೆ ನಮಗೆ ಕಾಳಜಿ ಇದೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ನಾವು ನೋಡಿಕೊಳ್ತೇವೆ ಎಂದು ಹೇಳಿದರು. ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನೈತಿಕ ಪೊಲೀಸ್ ಗಿರಿ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದೇವೆ. ಯಾರೇ ಕಾನೂನು ಕೈಗೆತ್ತಿಕೊಳ್ಳದಂತೆ ತಡೆಯಲು ಹೇಳಿದ್ದೇವೆ. ಕೋಮುವಾದ, ನೈತಿಕ ಪೊಲೀಸ್ ಗಿರಿ ನಮಗೆ ಅಗತ್ಯ ಇಲ್ಲ. ಜನರಿಗೆ ಜೀವನ ನಡೆಸಲು ಅಭಿವೃದ್ಧಿ ಬೇಕು, ಅದಷ್ಟೇ ಈಗಿನ ಅಗತ್ಯ. ಪ್ರಜಾಪ್ರಭುತ್ವದಲ್ಲಿ ಬೇರೆ ಏನೂ ಮಾಡಲು ಅವಕಾಶ ಇಲ್ಲ ಎಂದು ಹೇಳಿದರು.
Health minister Dinesh Gundu Rao on Saturday December 2, clarified on the chaos prevailing over the dialysis system in Karnataka and said, “The chaos over dialysis was existing even before I took charge as health minister. The earlier government had given the contract to two agencies.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm