ಬ್ರೇಕಿಂಗ್ ನ್ಯೂಸ್
03-12-23 11:22 am By Giridhar Shetty, Mangaluru ಕರಾವಳಿ
ಮಂಗಳೂರು, ಡಿ.3: ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರ ಅಹವಾಲು ಕೇಳಲು ಜಿಲ್ಲೆಯ ಉಸ್ತುವಾರಿ ಮಧು ಬಂಗಾರಪ್ಪ ಪಕ್ಷದ ಜಿಲ್ಲಾ ಕಚೇರಿಗೆ ಆಗಮಿಸಿದ್ದರು. ಶನಿವಾರ ಸಂಜೆ ಏಳು ಗಂಟೆಗೆ ಮಲ್ಲಿಕಟ್ಟೆ ಕಚೇರಿಗೆ ಆಗಮಿಸಿದ ಸಚಿವರು, ಪಕ್ಷದ ಬ್ಲಾಕ್ ಮಟ್ಟದ ಪ್ರಮುಖರು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಅಭಿಪ್ರಾಯ ಆಲಿಸಿದರು.
ಸಚಿವ ಮಧು ಬಂಗಾರಪ್ಪ ಒಬ್ಬರೇ ವೇದಿಕೆಯಲ್ಲಿ ಕುಳಿತು ಪ್ರಮುಖ ಸಮಿತಿಗಳ ಅಭಿಪ್ರಾಯಗಳನ್ನು ಪ್ರೇತ್ಯೇಕವಾಗಿ ಆಲಿಸಿದರು. ಈ ವೇಳೆ, ಹಲವು ನಾಯಕರ ಹೆಸರುಗಳು ಪ್ರಸ್ತಾಪವಾಗಿದ್ದು, ಹೆಚ್ಚಿನವರು ಹೊಸ ಮುಖವನ್ನು ಕಣಕ್ಕಿಳಿಸಬೇಕು ಎನ್ನುವ ಆಗ್ರಹ ಮಾಡಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಸದಸ್ಯರು ಮತ್ತು ಬ್ಲಾಕ್ ಮಟ್ಟದ ಪ್ರಮುಖರು ಹೊಸ ಮುಖವನ್ನು ಕಣಕ್ಕಿಳಿಸಿದಲ್ಲಿ ಈ ಬಾರಿ ಗೆಲುವು ಖಚಿತ ಎನ್ನುವ ಅಭಿಪ್ರಾಯ ನೀಡಿದ್ದಾರೆ. ವಕೀಲ ಆರ್. ಪದ್ಮರಾಜ್ ಹೆಸರು ಹೆಚ್ಚು ಪ್ರಸ್ತಾಪವಾಗಿದ್ದು ಬಿಜೆಪಿಯಲ್ಲಿ ಹಾಲಿ ಸಂಸದರ ಬಗೆಗಿರುವ ಭಿನ್ನಮತ ತಮಗೆ ವರವಾಗಬಹುದು ಎಂದು ಅಭಿಪ್ರಾಯ ನೀಡಿದ್ದಾರೆ.




ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಬಂಟ್ವಾಳ, ಪುತ್ತೂರು ಭಾಗದ ಪಕ್ಷದ ಪ್ರಮುಖರು ಮಾಜಿ ಸಚಿವ ರಮಾನಾಥ ರೈ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇದಲ್ಲದೆ, ಕೆಲವು ನಾಯಕರು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿನಯ ಕುಮಾರ್ ಸೊರಕೆ ಹೆಸರನ್ನೂ ಹೇಳಿದ್ದಾರೆ. ಯುವ ಮುಖಂಡ ರಕ್ಷಿತ್ ಶಿವರಾಂ ಹೆಸರೂ ಕೇಳಿಬಂದಿದೆ. ಮುಸ್ಲಿಂ ಸಮುದಾಯದಿಂದ ಕಣಚೂರು ಮೋನು, ಇನಾಯತ್ ಆಲಿ ಹೆಸರೂ ಪ್ರಸ್ತಾಪವಾಗಿದೆ. ಮಹಿಳೆಯರಿಗೆ ನೀಡುವುದಾದರೆ ಮಮತಾ ಗಟ್ಟಿ, ಶಕುಂತಳಾ ಶೆಟ್ಟಿಗೆ ನೀಡಬೇಕೆಂಬ ಮಾತು ಕೇಳಿಬಂದಿದೆ. ಎಲ್ಲರ ಅಭಿಪ್ರಾಯವನ್ನೂ ಮಧು ಬಂಗಾರಪ್ಪ ಆಲಿಸಿದ್ದು, ಕೆಪಿಸಿಸಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.




ಸಭೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಸಂಸದ ಬಿ. ಇಬ್ರಾಹಿಂ, ಅಭಯಚಂದ್ರ ಜೈನ್, ಇಬ್ರಾಹಿಂ ಕೋಡಿಜಾಲ್, ಜೆ.ಆರ್ ಲೋಬೊ, ಜಿಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಆಲಿ, ಮಮತಾ ಗಟ್ಟಿ, ಜಿ. ಕೃಷ್ಣಪ್ಪ, ಕಣಚೂರು ಮೋನು, ಪದ್ಮರಾಜ್ ಆರ್. ಸೇರಿದಂತೆ ಪಕ್ಷದ ಹಲವು ಸಮಿತಿಗಳ ಮುಖಂಡರು ಉಪಸ್ಥಿತರಿದ್ದರು.
Congress Ramanath Rai and Padmaraj names proposed for Loksabha election candidates from Mangalore, Madhu Bangarappa.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm