ಬ್ರೇಕಿಂಗ್ ನ್ಯೂಸ್
04-12-23 02:39 pm Mangalore Correspondent ಕರಾವಳಿ
ಮಂಗಳೂರು, ಡಿ.3: ನಗರದ ಕದ್ರಿ, ಶಿವಭಾಗ್, ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣವೊಂದು ರಾತ್ರಿ ವೇಳೆ ಓಡಾಟ ನಡೆಸಿದ್ದು, ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬಂದಿ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಕದ್ರಿ ಮತ್ತು ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣ ಸಂಚಾರ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮನೆಯ ಕಾಂಪೌಂಡ್ ಒಳಗಡೆ ಕೋಣ ಬಂದಿದ್ದು ಜನರು ಆತಂಕಗೊಂಡಿದ್ದಾರೆ. ಶಿವಭಾಗ್ ಕಡೆಯಿಂದ ಬಂದಿದ್ದ ಕಾಡು ಕೋಣ ಬಳಿಕ ರಸ್ತೆಯಲ್ಲೇ ಸಾಗಿ ಕೈಬಟ್ಟಲ್ ಮೂಲಕ ತೆರಳಿ ಕಣ್ಮರೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದರಂತೆ, ಇಂದು ಬೆಳಗ್ಗೆ ಕದ್ರಿ ಪರಿಸರದಲ್ಲಿ ಅರಣ್ಯ ಸಿಬಂದಿ ಹುಡುಕಾಟ ನಡೆಸಿದ್ದಾರೆ.



ಈ ಬಗ್ಗೆ ಎಸಿಎಫ್ ಶ್ರೀಧರ್ ಅವರಲ್ಲಿ ಕೇಳಿದಾಗ, ಕಾಡುಕೋಣ ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯರು ಫೋನ್ ಮಾಡಿ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಕಾಡುಕೋಣ ಪತ್ತೆಯಾಗಿದ್ದನ್ನು ಗಮನಿಸಿದ್ದೇವೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ, ಪತ್ತೆಯಾಗಿಲ್ಲ. ಇತ್ತೀಚೆಗೆ ಕುಲಶೇಖರ ಪರಿಸರದಲ್ಲಿ ಕಾಡುಕೋಣ ಕಂಡುಬಂದಿತ್ತು. ಅದನ್ನು ರಾತ್ರಿ ವೇಳೆಯೇ ಮರಳಿ ಕಾಡಿಗೆ ಅಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಂಗಳೂರು ನಗರಕ್ಕೆ ಬಂದಿದ್ದ ಕಾಡುಕೋಣವನ್ನು ಹಿಡಿಯುವ ಪ್ರಯತ್ನದಲ್ಲಿ ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದರಿಂದ ಸತ್ತು ಹೋಗಿತ್ತು. ನೀರುಮಾರ್ಗ, ಬಜ್ಪೆ ಪರಿಸರದ ಕಾಡಿನಲ್ಲಿ ಕಾಡು ಕೋಣ ವಾಸವಿದ್ದು, ಅಲ್ಲಿಂದ ರಾತ್ರಿ ವೇಳೆ ಬಂದಿರಬಹುದು ಅನ್ನುವ ಅಭಿಪ್ರಾಯ ಅರಣ್ಯ ಇಲಾಖೆಯ ಅಧಿಕಾರಿಗಳದ್ದಿದೆ. ಕದ್ರಿ ಪರಿಸರದಲ್ಲಿ ನಿನ್ನೆ ರಾತ್ರಿ ಕೋಣವನ್ನು ಹಲವರು ಕಂಡಿದ್ದಾರೆ. ಕಾಡು ಕೋಣ ಬಂದಿದೆ ಎನ್ನುವ ಸುದ್ದಿ ಕೇಳಿದ ಸ್ಥಳೀಯರು ಆತಂಕಗೊಂಡಿದ್ದಾರೆ.
Mangalore kadu kona found in Kadri area, forest officals in search. Residents in panic after some saw the bison moving around.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm