ಬ್ರೇಕಿಂಗ್ ನ್ಯೂಸ್
04-12-23 10:17 pm Mangalore Correspondent ಕರಾವಳಿ
ಮಂಗಳೂರು, ಡಿ.4: ನವೆಂಬರ್ 22ರಂದು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದೀಗ ಮಾಧ್ಯಮ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ "ಯಾರು ಪ್ರಾಂಜಲ್" ಎಂಬ ಉಡಾಫೆ ಉತ್ತರ ನೀಡಿರುವುದು ಮುಖ್ಯಮಂತ್ರಿಗಳ ನಡೆ ಮತ್ತು ನುಡಿಗೆ ಸಂಬಂಧವೇ ಇಲ್ಲ ಎಂಬುದು ಸಾಬೀತಾಗಿದೆ ಎಂದು ನಿವೃತ್ತ ಸೇನಾನಿ, ಬಿಜೆಪಿ ಮುಖಂಡ ಕ್ಯಾ. ಬೃಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
"ಬಾಳಿ ಬೆಳಗಬೇಕಿದ್ದ ನಮ್ಮ ರಾಜ್ಯದ ಒಬ್ಬ ಯುವಕ ದೇಶಕ್ಕಾಗಿ ಸರ್ವೋಚ್ಚ ಬಲಿದಾನಗೈದ ನೋವು ಇನ್ನೂ ಮಾಸಿಲ್ಲ, ಹೀಗಿರುವಾಗ ಪರಿಹಾರ ಬಿಡಿ, ನಮ್ಮ ಮುಖ್ಯಮಂತ್ರಿಗಳಿಗೆ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರೂ ತಿಳಿದಿಲ್ಲ ಎಂದರೆ ಇದು ನಮ್ಮ ದೌರ್ಭಾಗ್ಯ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಂತೆ ಈ ಭರವಸೆಯೂ ಪೊಳ್ಳಾಗದಿರಲಿ, ಮುಖ್ಯಮಂತ್ರಿಗಳು ನೀವು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಕೊಟ್ಟ ಮಾತಿನಂತೆ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Karnataka Chief Minister Siddaramaiah faced criticism after, during an interview, he seemed to forget the name of Captain MV Pranjal, who was killed during an encounter with terrorists in Jammu and Kashmir on November 22.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm