ಬ್ರೇಕಿಂಗ್ ನ್ಯೂಸ್
07-12-23 01:44 pm Mangalore Correspondent ಕರಾವಳಿ
ಮಂಗಳೂರು, ಡಿ.7: ಮೈನ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ್ದು ಆಟೋ ರಿಕ್ಷಾ ಮತ್ತು ಬೈಕ್ ಜಖಂ ಆಗಿದ್ದಲ್ಲದೆ, ರಸ್ತೆ ಬದಿ ಕುಳಿತಿದ್ದ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮಂಗಳೂರು ಹೊರವಲಯದ ಮುಲ್ಕಿ ಪೇಟೆಯಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು ಉಡುಪಿಯತ್ತ ತೆರಳುತ್ತಿದ್ದ ಲಾರಿ ಹೆದ್ದಾರಿ ಬಿಟ್ಟು ನೇರವಾಗಿ ಸರ್ವಿಸ್ ರಸ್ತೆಗೆ ನುಗ್ಗಿದೆ. ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಒಂದು ಆಟೋ ರಿಕ್ಷಾ ಹಾಗು ಬೈಕಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಸಂಗಪ್ಪ ಗಂಭೀರ ಗಾಯಗೊಂಡಿದ್ದಾರೆ. ಲಾಡ್ಜ್ ಒಂದರಲ್ಲಿ ವಾಚ್ಮನ್ ಆಗಿರುವ ಸಂಗಪ್ಪ ತನ್ನ ಮಗಳನ್ನು ಬಸ್ ನಿಲ್ದಾಣಕ್ಕೆ ಬಿಡಲು ಬರುತ್ತಿದ್ದರು. ಮಗಳು ಸವಿತಾ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ.
ಲಾರಿ ತಮ್ಮತ್ತ ನುಗ್ಗಿ ಬರುತ್ತಿದ್ದಾಗಲೇ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರು ಎದ್ದು ಓಡಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಿಂದ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ.
ಲಾರಿ ಡಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಬಿದ್ದಿದೆ. ಅದರಲ್ಲಿದ್ದ ಪ್ರಯಾಣಿಕರಿಗೂ ಗಾಯವಾಗಿದೆ. ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಮುಂದಕ್ಕೆ ಹೋಗಿದ್ದು ಮುಲ್ಕಿ ಪೊಲೀಸರು ಬೆನ್ನತ್ತಿ ಲಾರಿ ವಶಕ್ಕೆ ಪಡೆದಿದ್ದು ಚಾಲಕನನ್ನು ಬಂಧಿಸಿದ್ದಾರೆ.
#Mangalore #Mulki truck #accident, video goes viral. Mines truck comes to service road losing control on the highway. Man and his daughter on two wheeler have said to be injured. #BREAKING_NEWS pic.twitter.com/5nQcNMOMXi
— Headline Karnataka (@hknewsonline) December 7, 2023
Mangalore Mulki truck accident, video goes viral. Mines truck comes to service road losing control on the highway. Man and his daughter on two wheeler have said to be injured.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm