ಬ್ರೇಕಿಂಗ್ ನ್ಯೂಸ್
07-12-23 03:29 pm Mangalore Correspondent ಕರಾವಳಿ
ಮಂಗಳೂರು, ಡಿ.7; ನವರಾತ್ರಿ ಸಂದರ್ಭದಲ್ಲಿ ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ದೂರ ಇರಿಸಿದ್ದ ನಡೆ ಈಗ ಬೇರೆ ಕಡೆಯೂ ಮರುಕಳಿಸಿದೆ. ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಮಧ್ಯೆ ವ್ಯಾಪಾರಿಗಳು ಡಿವೈಎಫ್ಐ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಡಿ.14ರಿಂದ 19ರ ವರೆಗೆ ದೇವಸ್ಥಾನದಲ್ಲಿ ಷಷ್ಠಿ ಉತ್ಸವ ನಡೆಯಲಿದೆ. ಆದರೆ, ಉತ್ಸವದಲ್ಲಿ ವ್ಯಾಪಾರ ಮಾಡಲು ಮುಸ್ಲಿಮ್ ವ್ಯಾಪಾರಸ್ಥರು ಪೂರಕ ಪ್ರಕ್ರಿಯೆ ನಡೆಸಲು ಮುಂದಾಗಿರುವಾಗಲೇ, ಮುಸ್ಲಮರಿಗೆ ಅವಕಾಶ ನೀಡಬಾರದೆಂದು ಕೆಲವು ಸಂಘಟನೆಯವರು ಹೇಳಿದ್ದಾರೆ. ಹಾಗಾಗಿ, ನಿಮಗೆ ರಕ್ಷಣೆ ನೀಡಲು ನಮಗೆ ಸಾಧ್ಯವಿಲ್ಲ" ಎಂದು ದೇವಸ್ಥಾನ ಸಂಬಂಧಪಟ್ಟವರು ಹೇಳಿ ವ್ಯಾಪಾರ ಮಾಡದಂತೆ ಪರೋಕ್ಷ ತಡೆ ನೀಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿರುವುದು ಖಂಡನೀಯ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ಸರಕಾರದ ನಿಂತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೂ ಕಠಿಣ ಕ್ರಮ ಕೈಗೊಳ್ಳದೆ, ಸಾಮರಸ್ಯ ಕೆಡಿಸಲು ಪರೋಕ್ಷ ಬೆಂಬಲ ನೀಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಇಲ್ಲಿನ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mangalore Mudipu temple, Muslim vendors not allowed for business, DYFI complaints.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm