ಬ್ರೇಕಿಂಗ್ ನ್ಯೂಸ್
07-12-23 03:29 pm Mangalore Correspondent ಕರಾವಳಿ
ಮಂಗಳೂರು, ಡಿ.7; ನವರಾತ್ರಿ ಸಂದರ್ಭದಲ್ಲಿ ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ದೂರ ಇರಿಸಿದ್ದ ನಡೆ ಈಗ ಬೇರೆ ಕಡೆಯೂ ಮರುಕಳಿಸಿದೆ. ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಮಧ್ಯೆ ವ್ಯಾಪಾರಿಗಳು ಡಿವೈಎಫ್ಐ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಡಿ.14ರಿಂದ 19ರ ವರೆಗೆ ದೇವಸ್ಥಾನದಲ್ಲಿ ಷಷ್ಠಿ ಉತ್ಸವ ನಡೆಯಲಿದೆ. ಆದರೆ, ಉತ್ಸವದಲ್ಲಿ ವ್ಯಾಪಾರ ಮಾಡಲು ಮುಸ್ಲಿಮ್ ವ್ಯಾಪಾರಸ್ಥರು ಪೂರಕ ಪ್ರಕ್ರಿಯೆ ನಡೆಸಲು ಮುಂದಾಗಿರುವಾಗಲೇ, ಮುಸ್ಲಮರಿಗೆ ಅವಕಾಶ ನೀಡಬಾರದೆಂದು ಕೆಲವು ಸಂಘಟನೆಯವರು ಹೇಳಿದ್ದಾರೆ. ಹಾಗಾಗಿ, ನಿಮಗೆ ರಕ್ಷಣೆ ನೀಡಲು ನಮಗೆ ಸಾಧ್ಯವಿಲ್ಲ" ಎಂದು ದೇವಸ್ಥಾನ ಸಂಬಂಧಪಟ್ಟವರು ಹೇಳಿ ವ್ಯಾಪಾರ ಮಾಡದಂತೆ ಪರೋಕ್ಷ ತಡೆ ನೀಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿರುವುದು ಖಂಡನೀಯ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ಸರಕಾರದ ನಿಂತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೂ ಕಠಿಣ ಕ್ರಮ ಕೈಗೊಳ್ಳದೆ, ಸಾಮರಸ್ಯ ಕೆಡಿಸಲು ಪರೋಕ್ಷ ಬೆಂಬಲ ನೀಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಇಲ್ಲಿನ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mangalore Mudipu temple, Muslim vendors not allowed for business, DYFI complaints.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm