ಬ್ರೇಕಿಂಗ್ ನ್ಯೂಸ್
08-12-23 04:48 pm Udupi Correspondent ಕರಾವಳಿ
ಉಡುಪಿ, ಡಿ.08: ದೇಶಾದ್ಯಂತ ಹೃದಯಾಘಾತ ಒಂದೇ ಸಮನೆ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಡಾ. ಶಶಿಕಲಾ ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟವರು.
ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ.
ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.
ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದರು. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣ ಕಳೆದುಕೊಂಡರು.
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಾಕ್ಟರ್ಗೇ ಈ ರೀತಿಯಾ ಹೃದಯಾಘಾತ ಸಂಭವಿಸಿದ್ದು, ವೈದ್ಯಕೀಯ ವಲಯದಲ್ಲಿ ಆತಂಕ ಮೂಡಿಸಿದೆ.
Doctor gets heart attack on duty in Udupi. The deceased is identified as Dr Shashikala. She had retired in February 2022 but was continuing on contractual basis due to shortage of doctors. She was screening patients in the OPD.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm