ಬ್ರೇಕಿಂಗ್ ನ್ಯೂಸ್
08-12-23 10:36 pm Mangalore Correspondent ಕರಾವಳಿ
ಮಂಗಳೂರು, ಡಿ.8: ಸೋನಿ ಟಿವಿ ರಿಯಾಲಿಟಿ ಶೋ ಮಾಸ್ಟರ್ ಚೆಫ್ ಇಂಡಿಯಾ ಟ್ಯಾಲೆಂಟ್ ನಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಆಶಿಕ್ ಎಂಬ 24ರ ಹರೆಯದ ಯುವಕ ವಿನ್ನರ್ ಆಗಿ ಮೂಡಿಬಂದಿದ್ದಾರೆ.
ಅಕ್ಟೋಬರ್ 16ರಿಂದ ನಡೆದುಬಂದಿದ್ದ ರಿಯಾಲಿಟಿ ಶೋದಲ್ಲಿ ದೇಶಾದ್ಯಂತ ಚಾಲ್ತಿಯಲ್ಲಿರುವ ವಿಭಿನ್ನ ರೀತಿಯ ದೇಸಿ ಅಡುಗೆ ಮಾದರಿಗಳನ್ನು ತೋರಿಸುವುದು ಸವಾಲಾಗಿತ್ತು. ನಿಗದಿತ ಸಮಯದಲ್ಲಿ ಮಾಡಿ ತೋರಿಸಬೇಕಿದ್ದ ಮಾಸ್ಟರ್ ಚೆಫ್ ಸ್ಪರ್ಧೆಯಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ಯುವಕನೊಬ್ಬ ವಿನ್ನರ್ ಆಗಿದ್ದಾನೆ. ಆಮೂಲಕ ಮಂಗಳೂರಿನ ಯುವಕ ಅಪರೂಪದ ಮೈಲುಗಲ್ಲು ಎನ್ನಬಹುದಾದ ಸಾಧನೆಯನ್ನು ಮಾಡಿದ್ದು ದೇಶದ ಗಮನ ಸೆಳೆದಿದೆ.
ಮೊಹಮ್ಮದ್ ಆಶಿಕ್ ಪ್ರತಿಭಾನ್ವಿತ ಯುವಕನಾಗಿದ್ದರೂ, ಆರಂಭದಲ್ಲಿ ಹೊಟೇಲ್ ಮ್ಯಾನೇಜ್ಮೆಂಟಿನಲ್ಲಿ ಗುರುತರ ಸಾಧನೆ ಮಾಡಲು ಹಣಕಾಸು ತೊಂದರೆ ಎದುರಾಗಿತ್ತು. ಇದನ್ನು ಮೆಟ್ಟಿ ನಿಲ್ಲಲು ತನ್ನದೇ ಆದ ವಿಶೇಷ ರೆಸಿಪಿಯುಳ್ಳ ಕುಲ್ಕಿ ಹಬ್ ಎನ್ನುವ ಜ್ಯೂಸ್ ಶಾಪ್ ಒಂದನ್ನು ಮಂಗಳೂರಿನಲ್ಲಿ ಆರಂಭಿಸಿದ್ದರು. ಸೋನಿ ಟಿವಿಯಲ್ಲಿ ಈ ಹಿಂದೆ ನಡೆದಿದ್ದ ರಿಯಾಲಿಟಿ ಶೋದಲ್ಲಿ ಮೊಹಮ್ಮದ್ ಆಶಿಕ್ ಗಮನಸೆಳೆಯಲು ಪ್ರಯತ್ನ ಮಾಡಿದ್ದರೂ, ಅದು ಸಾಧ್ಯವಾಗಿರಲಿಲ್ಲ. ಎರಡನೇ ಪ್ರಯತ್ನದಲ್ಲಿ ಗುರುತರ ಸಾಧನೆ ಮಾಡಿದ್ದಲ್ಲದೆ, ಮಾಸ್ಟರ್ ಚೆಫ್ ಕಿರೀಟವನ್ನೂ ಗಿಟ್ಟಿಸಿಕೊಂಡಿದ್ದಾರೆ. ಈ ಸಾಧನೆಯ ಮೂಲಕ ಮೊಹಮ್ಮದ್ ಆಶಿಕ್ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ.
ಈ ಹಿಂದಿನ ತಪ್ಪುಗಳನ್ನು ನಿವಾರಿಸಿಕೊಂಡು ಸಾಧನೆ ತೋರಲು ಬಂದಿದ್ದೇನೆ. ನಿಶ್ಚಿತ ಗುರಿ ಇಟ್ಟುಕೊಂಡೇ ಬಂದಿದ್ದು, ಈ ಬಾರಿ ಗೆದ್ದು ತೋರಿಸುತ್ತೇನೆ. ಬರೀಯ ಗೆಲ್ಲಲು ಬಂದಿರುವುದಲ್ಲ. ಈ ಸಾಧನೆ ಮಾಡಬೇಕೆಂಬ ಉತ್ಸಾಹದಲ್ಲಿರುವ ಸಾವಿರಾರು ಮಂದಿಯ ಕನಸು ಈಡೇರಿಸಲು ಬಂದಿದ್ದೇನೆ ಎಂದು ಈ ಹಿಂದೆ ಔಟ್ ಲುಕ್ ಪತ್ರಿಕೆಗೆ ನೀಡಿದ್ದ ಸಂದರ್ಶನದಲ್ಲಿ ಮೊಹಮ್ಮದ್ ಆಶಿಕ್ ಅಭಿಪ್ರಾಯ ಪಟ್ಟಿದ್ದರು. ಮಾಸ್ಟರ್ ಚೆಫ್ ಇಂಡಿಯಾ ಸೀಸನ್ – 8 ಸೋನಿ ಲೈವ್ ನಲ್ಲಿ ಪ್ರಸಾರವಾಗಿದ್ದು, ಸೆಲೆಬ್ರಿಟಿ ಚೆಫ್ ಗಳಾದ ವಿಕಾಸ್ ಖನ್ನ, ರಣವೀರ್ ಬ್ರಾರ್, ಪೂಜಾ ಧಿಂಗ್ರಾ ತೀರ್ಪುಗಾರರಾಗಿದ್ದರು.
In a remarkable achievement, Mohammed Aashiq, a 24-year-old chef from Mangaluru, has claimed victory in the latest season of MasterChef India. The popular reality show, known for showcasing exceptional culinary talents, premiered on Sony Liv from October 16, featuring home cooks from across the country.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm