ಬ್ರೇಕಿಂಗ್ ನ್ಯೂಸ್
09-12-23 07:07 pm Mangaluru Correspondent ಕರಾವಳಿ
ಮಂಗಳೂರು, ಡಿ.9: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ವಿಶೇಷ ಗಮನ ಸೆಳೆದರು.
ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕವಿದೆ. ಇದನ್ನೇ ನಂಬಿ ಬದುಕು ನಡೆಸುವ ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಲಿರುವ ಬಗ್ಗೆ, ಆರ್ಥಿಕವಾಗಿ ಜಿಲ್ಲೆಗೆ ನಷ್ಟ ಉಂಟಾಗುವ ಬಗ್ಗೆ ಹಾಗೂ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಮರಳಿನ ಸಮಸ್ಯೆ ಕುರಿತು ಶಾಸಕ ಕಾಮತ್ ಸದನದ ಗಮನ ಸೆಳೆದರು.
ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿದ್ದು ಅದನ್ನು ಮರಳಿ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರನ್ನೊಳಗೊಂಡ ಸಮಿತಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಸಂಪೂರ್ಣ ವರದಿಯನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಅನುಮತಿ ದೊರೆತಿಲ್ಲ.
ಸದ್ಯ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೂ ಸಿಆರ್ಝಡ್ ಮರಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದರೆ ಮತ್ತೆ ಹಲವು ತಿಂಗಳ ಕಾಲ ಮರಳು ಸಿಗದೇ ತೀವ್ರ ಸಂಕಷ್ಟ ಅನುಭವಿಸಬೇಕಾಗುವ ಸ್ಥಿತಿ ಎದುರಾಗಲಿದೆ.
ಈಗಾಗಲೇ ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕಳುಹಿಸಲಾಗಿದ್ದರೂ ಇನ್ನೂ ಸಹ ನಿರಾಕ್ಷೇಪಣಾ (EC) ಪತ್ರ ನೀಡದೇ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಎಂ ಸ್ಯಾಂಡನ್ನು ರಸ್ತೆ ಅಥವಾ ಇನ್ನಿತರ ಉಪಯೋಗಗಳಿಗಾಗಿ ಮಾತ್ರ ಬಳಸಲಾಗುತ್ತದೆ, ಹೊರತು ಮನೆಗಳ ಕಟ್ಟಡಕ್ಕೆ ಹೆಚ್ಚು ಉಪಯೋಗಿಸುವುದಿಲ್ಲ. ಇದು ಸಭಾಧ್ಯಕ್ಷರಿಗೂ ತಿಳಿದಿರುವ ವಿಚಾರ. ಹಾಗಾಗಿ ಕೂಡಲೇ ನಿರಾಕ್ಷೇಪಣಾ (EC) ಪತ್ರ ನೀಡಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.
MLA Vedavyas kamath talks about sand issue of Mangalore in Assembly
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm