ಬ್ರೇಕಿಂಗ್ ನ್ಯೂಸ್
09-12-23 07:07 pm Mangaluru Correspondent ಕರಾವಳಿ
ಮಂಗಳೂರು, ಡಿ.9: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ವಿಶೇಷ ಗಮನ ಸೆಳೆದರು.
ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕವಿದೆ. ಇದನ್ನೇ ನಂಬಿ ಬದುಕು ನಡೆಸುವ ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಲಿರುವ ಬಗ್ಗೆ, ಆರ್ಥಿಕವಾಗಿ ಜಿಲ್ಲೆಗೆ ನಷ್ಟ ಉಂಟಾಗುವ ಬಗ್ಗೆ ಹಾಗೂ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಮರಳಿನ ಸಮಸ್ಯೆ ಕುರಿತು ಶಾಸಕ ಕಾಮತ್ ಸದನದ ಗಮನ ಸೆಳೆದರು.
ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿದ್ದು ಅದನ್ನು ಮರಳಿ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರನ್ನೊಳಗೊಂಡ ಸಮಿತಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಸಂಪೂರ್ಣ ವರದಿಯನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಅನುಮತಿ ದೊರೆತಿಲ್ಲ.
ಸದ್ಯ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೂ ಸಿಆರ್ಝಡ್ ಮರಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದರೆ ಮತ್ತೆ ಹಲವು ತಿಂಗಳ ಕಾಲ ಮರಳು ಸಿಗದೇ ತೀವ್ರ ಸಂಕಷ್ಟ ಅನುಭವಿಸಬೇಕಾಗುವ ಸ್ಥಿತಿ ಎದುರಾಗಲಿದೆ.
ಈಗಾಗಲೇ ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕಳುಹಿಸಲಾಗಿದ್ದರೂ ಇನ್ನೂ ಸಹ ನಿರಾಕ್ಷೇಪಣಾ (EC) ಪತ್ರ ನೀಡದೇ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಎಂ ಸ್ಯಾಂಡನ್ನು ರಸ್ತೆ ಅಥವಾ ಇನ್ನಿತರ ಉಪಯೋಗಗಳಿಗಾಗಿ ಮಾತ್ರ ಬಳಸಲಾಗುತ್ತದೆ, ಹೊರತು ಮನೆಗಳ ಕಟ್ಟಡಕ್ಕೆ ಹೆಚ್ಚು ಉಪಯೋಗಿಸುವುದಿಲ್ಲ. ಇದು ಸಭಾಧ್ಯಕ್ಷರಿಗೂ ತಿಳಿದಿರುವ ವಿಚಾರ. ಹಾಗಾಗಿ ಕೂಡಲೇ ನಿರಾಕ್ಷೇಪಣಾ (EC) ಪತ್ರ ನೀಡಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.
MLA Vedavyas kamath talks about sand issue of Mangalore in Assembly
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm