ಬ್ರೇಕಿಂಗ್ ನ್ಯೂಸ್
09-12-23 07:07 pm Mangaluru Correspondent ಕರಾವಳಿ
ಮಂಗಳೂರು, ಡಿ.9: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ವಿಶೇಷ ಗಮನ ಸೆಳೆದರು.
ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕವಿದೆ. ಇದನ್ನೇ ನಂಬಿ ಬದುಕು ನಡೆಸುವ ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಲಿರುವ ಬಗ್ಗೆ, ಆರ್ಥಿಕವಾಗಿ ಜಿಲ್ಲೆಗೆ ನಷ್ಟ ಉಂಟಾಗುವ ಬಗ್ಗೆ ಹಾಗೂ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಮರಳಿನ ಸಮಸ್ಯೆ ಕುರಿತು ಶಾಸಕ ಕಾಮತ್ ಸದನದ ಗಮನ ಸೆಳೆದರು.
ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿದ್ದು ಅದನ್ನು ಮರಳಿ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರನ್ನೊಳಗೊಂಡ ಸಮಿತಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಸಂಪೂರ್ಣ ವರದಿಯನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಅನುಮತಿ ದೊರೆತಿಲ್ಲ.
ಸದ್ಯ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೂ ಸಿಆರ್ಝಡ್ ಮರಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದರೆ ಮತ್ತೆ ಹಲವು ತಿಂಗಳ ಕಾಲ ಮರಳು ಸಿಗದೇ ತೀವ್ರ ಸಂಕಷ್ಟ ಅನುಭವಿಸಬೇಕಾಗುವ ಸ್ಥಿತಿ ಎದುರಾಗಲಿದೆ.
ಈಗಾಗಲೇ ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕಳುಹಿಸಲಾಗಿದ್ದರೂ ಇನ್ನೂ ಸಹ ನಿರಾಕ್ಷೇಪಣಾ (EC) ಪತ್ರ ನೀಡದೇ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಎಂ ಸ್ಯಾಂಡನ್ನು ರಸ್ತೆ ಅಥವಾ ಇನ್ನಿತರ ಉಪಯೋಗಗಳಿಗಾಗಿ ಮಾತ್ರ ಬಳಸಲಾಗುತ್ತದೆ, ಹೊರತು ಮನೆಗಳ ಕಟ್ಟಡಕ್ಕೆ ಹೆಚ್ಚು ಉಪಯೋಗಿಸುವುದಿಲ್ಲ. ಇದು ಸಭಾಧ್ಯಕ್ಷರಿಗೂ ತಿಳಿದಿರುವ ವಿಚಾರ. ಹಾಗಾಗಿ ಕೂಡಲೇ ನಿರಾಕ್ಷೇಪಣಾ (EC) ಪತ್ರ ನೀಡಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.
MLA Vedavyas kamath talks about sand issue of Mangalore in Assembly
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm