ಬ್ರೇಕಿಂಗ್ ನ್ಯೂಸ್
09-12-23 10:41 pm Mangaluru correspondent ಕರಾವಳಿ
ಮಂಗಳೂರು, ಡಿ.9: ಶ್ಯಾಕ್ಸ್ ಎಂಟರ್ಪ್ರೈಸಸ್ನ ಅಬ್ದುಲ್ ಶಕೀಲ್ ನಿರ್ಮಾಣದ ಬ್ಯಾರಿ ಭಾಷೆಯ ಚಲನಚಿತ್ರ ‘ಮುಸಾಫಿರ್’ಗೆ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ‘ಮುಸಾಫಿರ್’ ಸಿನೆಮಾದ ಮುಖ್ಯ ಪಾತ್ರಧಾರಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಹಾಗೂ ‘ಮುಸಾಫಿರ್’ ಸಿನೆಮಾಕ್ಕೆ ಸಾಹಿತ್ಯ ಬರೆದ ಪತ್ರಕರ್ತ ಹಂಝ ಮಲಾರ್ ಅವರು ‘ಕಾಂತಾರ’ ಸಿನೆಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಹಂಝ ಮಲಾರ್ ಅವರ ‘ಸೂಫಿ ಬ್ಯಾರಿಯ ಝಕಾತ್ ಯಾತ್ರೆ’ ಕಥೆ ಆಧಾರಿತ ‘ಮುಸಾಫಿರ್’ ಸಿನೆಮಾದಲ್ಲಿ ನಟಿಸಿದ್ದ ಸಾಹಿತಿ ಮುಹಮ್ಮದ್ ಬಡ್ಡೂರ್ ‘ಅಬ್ಬಾ’ ಬ್ಯಾರಿ ಸಿನೆಮಾದಲ್ಲೂ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.
ಕನ್ನಡವಲ್ಲದೆ ತುಳು, ಬ್ಯಾರಿ, ಕೊಂಕಣಿ, ಕೊಡವ, ಬಂಜಾರದಂತಹ ರಾಜ್ಯದ ಪ್ರಾದೇಶಿಕ ಭಾಷೆಗಳ ಸಿನೆಮಾವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಚಿತ್ರನಟರಾದ ರವಿಚಂದ್ರನ್, ವಿನೋದ್ ರಾಜ್, ಶ್ರೀನಾಥ್, ಧ್ರುವ ಸರ್ಜಾ, ಉಮಾಶ್ರೀ, ಅನು ಪ್ರಭಾಕರ್, ವಸಿಷ್ಠ ಸಿಂಹ, ಅನಿರುದ್ಧ, ಪ್ರೇಮಾ, ಹರಿಪ್ರಿಯಾ, ಉಲ್ಲಾಸ್ ಹಾಗೂ ಆಯೋಜಕರಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಂದಳಿಕೆ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್, ಅನಿತಾ ರೆಡ್ಡಿ, ಭಾ.ಮಾ. ಗಿರೀಶ್, ಹರ್ಷಿತಾ, ನಂದಿತಾ, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
Musafir Beary movie bags Karnataka Nandi film award. The award was presented by Kantara Hero and director Rishab Shetty to Hamza Malar
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm