ಬ್ರೇಕಿಂಗ್ ನ್ಯೂಸ್
10-12-23 12:06 pm Mangalore Correspondent ಕರಾವಳಿ
ಉಳ್ಳಾಲ, ಡಿ.10: ಸೋಮೇಶ್ವರದಲ್ಲಿ ನಿನ್ನೆ ಮಧ್ಯಾಹ್ನ ಸಮುದ್ರ ಪಾಲಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿಗಳ ಮೃತದೇಹಗಳು ಇಂದು ಬೆಳಗ್ಗೆ ಅದೇ ಸ್ಥಳದಲ್ಲಿ ಪತ್ತೆಯಾಗಿದೆ. ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಮೃತರು.
ನಿನ್ನೆ ಮಧ್ಯಾಹ್ನದ ಬಳಿಕ ಕಾಲೇಜಿಗೆ ರಜೆ ಇದ್ದ ಕಾರಣ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಪಕ್ಕದ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಯಶ್ವಿತ್ ಮತ್ತು ಯುವರಾಜ್ ನೀರಾಟಕ್ಕಿಳಿದಿದ್ದು ದೈತ್ಯ ಅಲೆಗಳು ಅವರಿಬ್ಬರನ್ನು ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಪರಿಣಿತ ಈಜುಗಾರರು ರಾತ್ರಿ ವರೆಗೂ ಶೋಧ ನಡೆಸಿದರೂ ನೀರುಪಾಲಾದ ಯುವರಾಜ್, ಯಶ್ವಿತ್ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಘಟನೆ ನಡೆದ ಸ್ಥಳದಲ್ಲೇ ವಿದ್ಯಾರ್ಥಿಗಳ ಮೃತದೇಹಗಳು ದೊರೆತಿದ್ದು ಉಳ್ಳಾಲ ಪೊಲೀಸರು ದೇರಳಕಟ್ಟೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



ಮೃತ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು ತಂದೆ, ತಾಯಿ ಏಕೈಕ ಸಹೋದರಿಯರನ್ನ ಅಗಲಿದ್ದಾರೆ. ಸೋಮೇಶ್ವರ ಕಡಲ ಕಿನಾರೆಯಲ್ಲಿ ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಇಲ್ಲಿ ಖಾಯಂ ಜೀವ ರಕ್ಷಕ ಸಿಬ್ಬಂದಿಗಳನ್ನ ನೇಮಿಸಿಲ್ಲ. ಕಡಲ ತೀರಕ್ಕೆ ಭೇಟಿ ಕೊಡುವ ಜನರು ಜಾಗರೂಕರಾಗಿರಬೇಕೆಂದು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಬಾಲಕೃಷ್ಣ ಎಚ್ಚರಿಸಿದ್ದಾರೆ.
Mangalore Two students drowned at Someshwar Beach, body found. Two students had drowned into the sea while they were playing with their friends. The body had been found now
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm