ಬ್ರೇಕಿಂಗ್ ನ್ಯೂಸ್
11-12-23 10:36 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಮಫ್ತಿಯಲ್ಲಿ ಡ್ರೆಸ್ಸು, ಸೊಂಟಕ್ಕೆ ಪೊಲೀಸ್ ಇಲಾಖೆಯ ವಾಕಿ ಟಾಕಿ.. ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಹೆಲ್ಮೆಟ್ ಧರಿಸದೆ, ಮಫ್ತಿಯಲ್ಲಿದ್ದರೂ ಪೊಲೀಸ್ ವಾಕಿಟಾಕಿ ಹಾಕ್ಕೊಂಡು ಹೆದ್ದಾರಿಯಲ್ಲಿ ರಾಜಾರೋಷವಾಗಿ ಟೂ ವೀಲರ್ ಡ್ರೈವ್ ಮಾಡಿದ್ದು, ಕಾನೂನು ಪಾಲಕರೇ ಕಾನೂನು ಭಂಜನೆ ಮಾಡಿ ಸಿಕ್ಕಿಬಿದ್ದಿದ್ದಾರೆ.
ಸಾಮಾನ್ಯ ಜನರು ಹೆಲ್ಮೆಟ್ ಹಾಕದೇ ಇದ್ದರೆ ದಂಡ ವಿಧಿಸುವ ಪೊಲೀಸ್ ಅಧಿಕಾರಿಯೇ ತಮಗೆ ಕಾನೂನು ಪ್ರತ್ಯೇಕ ಇದೆಯೋ ಎನ್ನುವಂತೆ ವರ್ತಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಉಳ್ಳಾಲ ಠಾಣೆ ಪಿಎಸ್ಐ ಧನರಾಜ್ ಮಫ್ತಿಯಲ್ಲಿ ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟಿನ ಕಡೆಗೆ ದ್ವಿಚಕ್ರ ವಾಹನ ಚಲಾಯಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಸೊಂಟದಲ್ಲಿ ವಾಕಿ ಟಾಕಿ ಇದ್ದುದನ್ನ ಕಂಡ ಇತರೇ ವಾಹನ ಸವಾರರು ಈತ ಪೊಲೀಸ್ ಎಂದು ಖಾತರಿ ಪಡಿಸಿ ಫೋಟೊ ಕ್ಲಿಕ್ಕಿಸಿದ್ದಾರೆ.

ಪಿಎಸ್ ಐ ಧನರಾಜ್ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಸಂಚಾರಿ ಕಾನೂನು ಉಲ್ಲಂಘಿಸುವ ವಾಹನ ಸವಾರರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಾರಂತೆ. ಆದರೆ ಕಾನೂನು ರಕ್ಷಣೆ ಮಾಡುವ ಹೊಣೆಗಾರಿಕೆಯುಳ್ಳ ಅದೇ ಪಿಎಸ್ ಐ ಈ ರೀತಿ ಹೆದ್ದಾರಿಯಲ್ಲಿ ಕಾನೂನನ್ನ ಗಾಳಿಗೆ ತೂರಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸೋದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಪಿಎಸ್ ಐ ಧನರಾಜ್ ಅವರ ತಲೆಗೆ ಸಣ್ಣ ಗಾಯವಾಗಿ ಪ್ಲಾಸ್ಟರ್ ಹಾಕಲಾಗಿದೆ. ಅದನ್ನೇ ನೆಪವಾಗಿಸಿ ಕಳೆದ ಕೆಲವು ದಿನಗಳಿಂದ ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದಾರೆ. ಈ ಬಗ್ಗೆ ನಾವು ಬುದ್ದಿ ಹೇಳಿದರೂ ಕೇಳುತ್ತಿಲ್ಲವೆಂದು ಉಳ್ಳಾಲ ಠಾಣೆಯ ಸಿಬ್ಬಂದಿಗಳು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಜನರಿಗೆಲ್ಲ ಒಂದೇ ರೀತಿ ಇರುವ ಕಾನೂನನ್ನು ಪೊಲೀಸರು ಉಲ್ಲಂಘನೆ ಮಾಡಲಾಗುತ್ತದೆಯೇ ? ಸಾಮಾನ್ಯ ಜನರು ಇದೇ ರೀತಿ ವರ್ತಿಸಿದರೆ, ಪೊಲೀಸರು ಹಾಗೇ ಬಿಡುತ್ತಾರೆಯೇ? ಮಂಗಳೂರು ಪೊಲೀಸ್ ಆಯುಕ್ತರು ಈ ಬಗ್ಗೆ ಏನು ಹೇಳುತ್ತಾರೋ..? ಈ ಸುದ್ದಿ ಅವರ ಕಿವಿಗೂ ತಲುಪದೆ ಇರಲಾರದು.
Mangalore Ullal Police PSI Dhanraj photo without helmet goes viral.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm