ಬ್ರೇಕಿಂಗ್ ನ್ಯೂಸ್
11-12-23 10:36 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಮಫ್ತಿಯಲ್ಲಿ ಡ್ರೆಸ್ಸು, ಸೊಂಟಕ್ಕೆ ಪೊಲೀಸ್ ಇಲಾಖೆಯ ವಾಕಿ ಟಾಕಿ.. ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಹೆಲ್ಮೆಟ್ ಧರಿಸದೆ, ಮಫ್ತಿಯಲ್ಲಿದ್ದರೂ ಪೊಲೀಸ್ ವಾಕಿಟಾಕಿ ಹಾಕ್ಕೊಂಡು ಹೆದ್ದಾರಿಯಲ್ಲಿ ರಾಜಾರೋಷವಾಗಿ ಟೂ ವೀಲರ್ ಡ್ರೈವ್ ಮಾಡಿದ್ದು, ಕಾನೂನು ಪಾಲಕರೇ ಕಾನೂನು ಭಂಜನೆ ಮಾಡಿ ಸಿಕ್ಕಿಬಿದ್ದಿದ್ದಾರೆ.
ಸಾಮಾನ್ಯ ಜನರು ಹೆಲ್ಮೆಟ್ ಹಾಕದೇ ಇದ್ದರೆ ದಂಡ ವಿಧಿಸುವ ಪೊಲೀಸ್ ಅಧಿಕಾರಿಯೇ ತಮಗೆ ಕಾನೂನು ಪ್ರತ್ಯೇಕ ಇದೆಯೋ ಎನ್ನುವಂತೆ ವರ್ತಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಉಳ್ಳಾಲ ಠಾಣೆ ಪಿಎಸ್ಐ ಧನರಾಜ್ ಮಫ್ತಿಯಲ್ಲಿ ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟಿನ ಕಡೆಗೆ ದ್ವಿಚಕ್ರ ವಾಹನ ಚಲಾಯಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಸೊಂಟದಲ್ಲಿ ವಾಕಿ ಟಾಕಿ ಇದ್ದುದನ್ನ ಕಂಡ ಇತರೇ ವಾಹನ ಸವಾರರು ಈತ ಪೊಲೀಸ್ ಎಂದು ಖಾತರಿ ಪಡಿಸಿ ಫೋಟೊ ಕ್ಲಿಕ್ಕಿಸಿದ್ದಾರೆ.

ಪಿಎಸ್ ಐ ಧನರಾಜ್ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಸಂಚಾರಿ ಕಾನೂನು ಉಲ್ಲಂಘಿಸುವ ವಾಹನ ಸವಾರರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಾರಂತೆ. ಆದರೆ ಕಾನೂನು ರಕ್ಷಣೆ ಮಾಡುವ ಹೊಣೆಗಾರಿಕೆಯುಳ್ಳ ಅದೇ ಪಿಎಸ್ ಐ ಈ ರೀತಿ ಹೆದ್ದಾರಿಯಲ್ಲಿ ಕಾನೂನನ್ನ ಗಾಳಿಗೆ ತೂರಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸೋದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಪಿಎಸ್ ಐ ಧನರಾಜ್ ಅವರ ತಲೆಗೆ ಸಣ್ಣ ಗಾಯವಾಗಿ ಪ್ಲಾಸ್ಟರ್ ಹಾಕಲಾಗಿದೆ. ಅದನ್ನೇ ನೆಪವಾಗಿಸಿ ಕಳೆದ ಕೆಲವು ದಿನಗಳಿಂದ ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದಾರೆ. ಈ ಬಗ್ಗೆ ನಾವು ಬುದ್ದಿ ಹೇಳಿದರೂ ಕೇಳುತ್ತಿಲ್ಲವೆಂದು ಉಳ್ಳಾಲ ಠಾಣೆಯ ಸಿಬ್ಬಂದಿಗಳು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಜನರಿಗೆಲ್ಲ ಒಂದೇ ರೀತಿ ಇರುವ ಕಾನೂನನ್ನು ಪೊಲೀಸರು ಉಲ್ಲಂಘನೆ ಮಾಡಲಾಗುತ್ತದೆಯೇ ? ಸಾಮಾನ್ಯ ಜನರು ಇದೇ ರೀತಿ ವರ್ತಿಸಿದರೆ, ಪೊಲೀಸರು ಹಾಗೇ ಬಿಡುತ್ತಾರೆಯೇ? ಮಂಗಳೂರು ಪೊಲೀಸ್ ಆಯುಕ್ತರು ಈ ಬಗ್ಗೆ ಏನು ಹೇಳುತ್ತಾರೋ..? ಈ ಸುದ್ದಿ ಅವರ ಕಿವಿಗೂ ತಲುಪದೆ ಇರಲಾರದು.
Mangalore Ullal Police PSI Dhanraj photo without helmet goes viral.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm