ಬ್ರೇಕಿಂಗ್ ನ್ಯೂಸ್
12-12-23 09:17 pm Mangalore Correspondent ಕರಾವಳಿ
ಮಂಗಳೂರು, ಡಿ.12: ಮಂಗಳಾ ಸ್ಟೇಡಿಯಂ ಆವರಣದಲ್ಲಿರುವ ಈಜು ಕೊಳದಲ್ಲಿ ಯುವಕನೊಬ್ಬ ಈಜುತ್ತಿದ್ದಾಗಲೇ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಹರ್ಯಾಣದ ಗುರ್ಗಾಂವ್ ಮೂಲದ ಅಭಿಷೇಕ್ ಆನಂದ್ (30) ಎನ್ನುವ ಯುವಕ ಮೃತ ವ್ಯಕ್ತಿ. ಸಂಜೆ 5 ಗಂಟೆಯ ವೇಳೆಗೆ ಅಭಿಷೇಕ್ ಈಜು ಕೊಳಕ್ಕೆ ಬಂದಿದ್ದು ಟಿಕೇಟ್ ಪಡೆದು ಈಜಲು ಮುಂದಾಗಿದ್ದ. ಇದೇ ವೇಳೆ, ಅಭಿಷೇಕ್ ಈಜು ಬಾರದೆ ನೀರಿನಲ್ಲಿ ಮುಳುಗಡೆಯಾಗಿದ್ದಾನೆ ಎನ್ನಲಾಗುತ್ತಿದೆ.
ಆರು ಗಂಟೆಯ ವೇಳೆಗೆ ಮಕ್ಕಳು ಈಜುತ್ತಿದ್ದಾಗ ನೀರಿನ ಅಡಿಯಲ್ಲಿ ಮುಳುಗಿದ್ದ ವ್ಯಕ್ತಿಯನ್ನು ಗಮನಿಸಿ ಕೋಚ್ ಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆತನನ್ನು ನೀರಿನಿಂದ ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸಲು ಯತ್ನಿಸಿದ್ದಾರೆ. ಅಲ್ಲದೆ, ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಯುವಕ ಮೃತಪಟ್ಟಿದ್ದ. ಅಭಿಷೇಕ್ ಮಂಗಳೂರಿನಲ್ಲಿ ಗ್ಯಾರೇಜ್ ಒಂದರಲ್ಲಿ ಕೆಲಸಕ್ಕಿದ್ದು, ಕೆಲವೊಮ್ಮೆ ಈಜು ಕೊಳಕ್ಕೆ ಬರುತ್ತಿದ್ದ ಎನ್ನುವ ಮಾಹಿತಿ ಅಲ್ಲಿನ ಸಿಬಂದಿಯಿಂದ ತಿಳಿದುಬಂದಿದೆ.
ಅಭಿಷೇಕ್ ಮಂಗಳೂರಿನಲ್ಲಿ ಯಾವುದೇ ಸಂಬಂಧಿಕರನ್ನು ಹೊಂದಿಲ್ಲ. ಹೀಗಾಗಿ ಆತನ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮಹಾನಗರ ಪಾಲಿಕೆಯಿಂದ ನಿರ್ವಹಿಸಲ್ಪಡುವ ಮಂಗಳಾ ಈಜು ಕೊಳದಲ್ಲಿ ಸಾರ್ವಜನಿಕರು, ಮಕ್ಕಳು ಈಜುತ್ತಿರುವಾಗ ನೋಡಿಕೊಳ್ಳಲು ಸಿಬಂದಿ ಇರುತ್ತಾರೆ. ಯಾವುದೇ ಅಪಾಯಗಳಾದಲ್ಲಿ ಮುಂಜಾಗ್ರತೆ ವಹಿಸಲು ಲೈಫ್ ಗಾರ್ಡ್ ಇರುತ್ತಾರೆ. ಆದರೂ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಸಿಬಂದಿ ನಿರ್ಲಕ್ಷ್ಯ ಎನ್ನಬೇಕಷ್ಟೆ. ಸಾರ್ವಜನಿಕ ಪ್ರವೇಶ ಇರುವ ಸಂಜೆ ಹೊತ್ತಿಗೆ ಬಹಳಷ್ಟು ಮಂದಿ ಈಜು ಕಲಿಯಲು ಬರುತ್ತಿದ್ದು ಟಿಕೆಟ್ ಪಡೆದು ತಮ್ಮಷ್ಟಕ್ಕೆ ಈಜಲು ಪ್ರಯತ್ನ ಪಡುತ್ತಾರೆ. ಇಂಥ ಸಂದರ್ಭದಲ್ಲಿಯೇ ಅಭಿಷೇಕ್ ನೀರಿನಾಳದಲ್ಲಿ ಮುಳುಗಿ ಮೃತಪಟ್ಟಿರುವ ಸಾಧ್ಯತೆಯಿದೆ.
Gurgaon, Haryana native drowns at Mangala swimming pool in Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm