ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.

ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm