ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.

ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm