ಬ್ರೇಕಿಂಗ್ ನ್ಯೂಸ್
14-12-23 08:05 pm Mangalore Correspondent ಕರಾವಳಿ
ಪುತ್ತೂರು, ಡಿ.14: ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ವಿರುದ್ಧ ಪುತ್ತಿಲ ಪರಿವಾರದ ಬಂಡಾಯ ಮುಂದುವರಿದಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಎರಡೂ ಸ್ಥಾನಗಳಿಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಗಳನ್ನು ಇಳಿಸಲಾಗಿದೆ. ಗುರುವಾರ ಬೆಳಗ್ಗೆ ಸಂಘ ಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಮೆರವಣಿಗೆ ಮೂಲಕ ಬಂದು ನಗರಸಭೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ವಾರ್ಡ್ ನಂಬರ್ 1ರಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ ಅನ್ನಪೂರ್ಣ ಎಸ್.ಕೆ. ರಾವ್ ಹಾಗೂ ವಾರ್ಡ್ ನಂಬರ್ 11ಕ್ಕೆ ಚಿಂತನ್ ಪಿ. ಅವರು ನಾಮಪತ್ರ ಸಲ್ಲಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ, ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರಾಧ್ಯಕ್ಷ ಅನಿಲ್ ತೆಂಕಿಲ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಅರುಣ್ ಪುತ್ತಿಲ ಮಾತನಾಡಿ, ದೇಶವೇ ಯುವ ನಾಯಕತ್ವಕ್ಕೆ ಮಣೆ ಹಾಕುತ್ತಿರುವಾಗ ನಾವು ಕೂಡ ಯುವ ನಾಯಕರಿಗೆ ಹಾಗೂ ಸಾಮಾನ್ಯ ಸ್ವಯಂಸೇವಕರಿಗೆ ಅವಕಾಶ ನೀಡಿದ್ದೇವೆ. ನಾರಿ ಶಕ್ತಿ ಭಾರತದ ಶಕ್ತಿ, ಎಲ್ಲ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನತೆ ಸಿಗಬೇಕು ಅನ್ನುವ ಉದ್ದೇಶದಿಂದ ಅವಕಾಶ ನೀಡಿದ್ದೇವೆ ಎಂದು ಹೇಳಿದರು.

ಬಿಜೆಪಿಯಿಂದಲೂ ಅಭ್ಯರ್ಥಿ ಘೋಷಣೆ
ಇತ್ತ ಬಿಜೆಪಿಯಿಂದಲೂ ಎರಡೂ ವಾರ್ಡ್ ಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಬೆಳಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಸಭೆ ನಡೆಸಿ, ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ. ಆನಂತರ, ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒಂದನೇ ವಾರ್ಡ್ ಗೆ ಸುನೀತಾ, 11ನೇ ವಾರ್ಡ್ ಗೆ ರಮೇಶ್ ರೈ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಪುತ್ತಿಲ ಪರಿವಾರದ ಬಂಡಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುದರ್ಶನ್ ಮೂಡುಬಿದ್ರೆ, ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ಪಕ್ಷದ ನೆಲೆಯಲ್ಲಿ ಅಭ್ಯರ್ಥಿ ಇಳಿಸಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಯಾರಿಗೇ ಬೇಕಾದರೂ ಚುನಾವಣೆ ಸ್ಪರ್ಧಿಸಲು ಅವಕಾಶ ಇದೆ. ಪಕ್ಷದ ಚೌಕಟ್ಟಿನಲ್ಲಿ ನಾವು ಅಭ್ಯರ್ಥಿ ಹಾಕಿದ್ದು, ಸ್ಪರ್ಧಿಸಿ ಗೆಲ್ಲುತ್ತೇವೆ ಎಂದು ಹೇಳಿದರು.
ಗ್ರಾಪಂ ಬಳಿಕ ನಗರಸಭೆಗೂ ಬಂಡಾಯ
ಮೂರು ತಿಂಗಳ ಹಿಂದೆ ಪುತ್ತೂರಿನಲ್ಲಿ ನಡೆದ ಮೂರು ಗ್ರಾಮ ಪಂಚಾಯತ್ ಉಪ ಚುನಾವಣೆಗಳಲ್ಲಿಯೂ ಪುತ್ತಿಲ ಪರಿವಾರ ಬಂಡಾಯ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿತ್ತು. ಇದೀಗ ನಗರಸಭೆಯಲ್ಲೂ ಬಂಡಾಯ ಮುಂದುವರಿದಿದ್ದು, ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ. ಉನ್ನತ ಮಟ್ಟದಲ್ಲಿ ಪುತ್ತಿಲ ಪರಿವಾರದ ಮುಖಂಡರನ್ನು ಪಕ್ಷಕ್ಕೆ ಕರೆತರಲು ಪ್ರಯತ್ನಗಳು ನಡೆದಿದ್ದರೂ, ಅದು ಸಫಲವಾಗಿರಲಿಲ್ಲ. ಅರುಣ್ ಪುತ್ತಿಲ ಪಕ್ಷ ಸೇರ್ಪಡೆಗೆ ಪುತ್ತೂರಿನಲ್ಲಿ ದೊಡ್ಡ ತಲೆಗಳೇ ಅಡ್ಡಿಯಾಗಿರುವುದು ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಇದೀಗ ನಗರಸಭೆಯಲ್ಲೂ ಪುತ್ತಿಲ ಪರಿವಾರ ತೊಡೆ ತಟ್ಟಿರುವುದು ಕಾಂಗ್ರೆಸ್ ಜೊತೆಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
Puttur town municapal elections two BJP candidates nominated against Arun Puthila team.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm