ಬ್ರೇಕಿಂಗ್ ನ್ಯೂಸ್
17-11-20 11:09 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 17: ಪ್ರಸಿದ್ಧ ವ್ಯಕ್ತಿಗಳ ಹೆಸರಲ್ಲಿ ನಕಲಿ ಐಡಿ ಕ್ರಿಯೇಟ್ ಮಾಡಿ ಹಣ ಪೀಕಿಸುವ ಖದೀಮರು ಹೆಚ್ಚುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಉಪಾಯುಕ್ತರಾಗಿರುವ ಐಎಎಸ್ ಅಧಿಕಾರಿ ಡಾ.ಸಂತೋಷ್ ಕುಮಾರ್ ಹೆಸರಲ್ಲಿ ನಕಲಿ ಐಡಿ ಸೃಷ್ಟಿಸಿ ಹಲವರಿಂದ ಹಣ ಪೀಕಿಸ್ತಿರುವ ವಿಚಾರ ಬೆಳಕಿಗೆ ಬಂದಿದೆ.
ಸಂತೋಷ್ ಕುಮಾರ್ ಹೆಸರಿನಲ್ಲಿ ಅವರದೇ ಒರಿಜಿನಲ್ ಐಡಿಯಲ್ಲಿರುವ ಫೋಟೊ ಮತ್ತು ಹೆಸರು, ಹುದ್ದೆಯನ್ನು ಬಳಸಿಕೊಂಡು ಮತ್ತೊಂದು ಫೇಸ್ಬುಕ್ ಐಡಿ ಕ್ರಿಯೇಟ್ ಮಾಡಲಾಗಿದೆ. ಅಲ್ಲದೆ, ಅವರ ಸ್ನೇಹಿತರ ಲಿಸ್ಟ್ ಸಂಗ್ರಹಿಸಿ, ಹಣದ ಅಗತ್ಯ ಇರುವುದನ್ನು ಮನವರಿಕೆ ಮಾಡಿ ಹಣ ಕೇಳುತ್ತಿರುವುದು ಬಯಲಾಗಿದೆ.
ಸ್ನೇಹಿತನ ಮಗುವಿಗೆ ಹುಷಾರಿಲ್ಲ , ಸೀರಿಯಸ್ ಆಗಿದೆ. ಹತ್ತಿರದ ಸಂಬಂಧಿಕರು ಅನಾರೋಗ್ಯದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ತುರ್ತು ಹಣದ ಅಗತ್ಯ ಇದೆ. ಗೂಗಲ್ ಪೇ ಇದ್ದರೆ ಆದಷ್ಟು ಬೇಗ ಹಣ ರವಾನಿಸಿ. ಬೆಳಗ್ಗೆ ಹಿಂತಿರುಗಿಸುತ್ತೇನೆ... ಹೀಗೆಂದು ಸ್ನೇಹಿತರಿಗೆ ಮೆಸೆಂಜರ್ ಮೂಲಕ ಸಂದೇಶ ಕಳಿಸುವ ನಕಲಿ ವ್ಯಕ್ತಿ ಹಲವರ ಬಳಿಯಿಂದ ಹಣ ಲಪಟಾಯಿಸಿರುವ ಮಾಹಿತಿಯಿದೆ.
ಆಯುಕ್ತರಿಗೆ ಫೇಸ್ಬುಕ್ ಫ್ರೆಂಡ್ ಆಗಿರುವ ಮಾಧ್ಯಮದ ವ್ಯಕ್ತಿಯೊಬ್ಬರಿಗೆ ಇದೇ ರೀತಿಯ ಮೆಸೇಜ್ ಬಂದಿತ್ತು. ಹಣದ ಅಗತ್ಯ ಇರುವುದಾಗಿ ಹೇಳಿಕೊಂಡಿದ್ದನ್ನು ಅರಿತ ಮಾಧ್ಯಮ ಕ್ಷೇತ್ರದ ವ್ಯಕ್ತಿ ಕೂಡಲೇ ಉಪಾಯುಕ್ತ ಸಂತೋಷ್ ಕುಮಾರ್ ಅವರಿಗೆ ಫೋನಾಯಿಸಿದ್ದಾರೆ. ಅದಾಗಲೇ ಹಲವರಿಂದ ಫೋನ್ ಬಂದಿದ್ದರಿಂದ ಎಚ್ಚತ್ತುಕೊಂಡಿದ್ದ ಆಯುಕ್ತರು ತನ್ನ ಒರಿಜಿನಲ್ ಐಡಿಯಲ್ಲಿ ಮನವಿ ಕೂಡ ಮಾಡಿಕೊಂಡಿದ್ದರು. ಯಾರು ಕೂಡ ನನ್ನ ಹೆಸರಲ್ಲಿ ಹಣ ಕೇಳಿ, ಪೀಡಿಸಿದರೆ ಮೋಸ ಹೋಗಬೇಡಿ. ಈ ಬಗ್ಗೆ ಪೊಲೀಸ್ ದೂರು ಕೊಟ್ಟಿದ್ದಾಗಿ ಮಾಹಿತಿ ನೀಡಿದ್ದರು.
ಈ ಬಗ್ಗೆ ಆಯುಕ್ತರನ್ನು ಸಂಪರ್ಕಿಸಿದಾಗ, ಫೇಕ್ ಅಕೌಂಟ್ ಮೂಲಕ ಖದೀಮರು ಹಣ ಕೇಳಿರುವುದನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಈಗಾಗಲೇ ಸೈಬರ್ ಕ್ರೈಮ್ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಗೆ ತಿಳಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
Fraudsters create fake facebook id of Revenue Assistant Commissioner Santosh Kumar, Mangalore and have looted money through online. A case has been registered to the cyber crime and also the issue has been brought to the notice of Commissioner of police said Santosh Kumar to Headline Karnataka.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 08:01 pm
Mangalore Correspondent
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm