ಬ್ರೇಕಿಂಗ್ ನ್ಯೂಸ್
14-12-23 10:13 pm Mangalore Correspondent ಕರಾವಳಿ
ಮಂಗಳೂರು, ಡಿ.14: ಚುನಾವಣೆಗೆ ಮೊದಲೇ ಬಿಲ್ಲವ ಸಮುದಾಯದಿಂದ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಬೇಡಿಕೆ ಇಡಲಾಗಿತ್ತು. ಬಿಜೆಪಿ ಸರಕಾರ ಕೊನೆಯ ಕ್ಷಣದಲ್ಲಿ ನಿಗಮ ರಚನೆ ಮಾಡಿ ಘೋಷಣೆ ಮಾಡಿತ್ತು. ಆದರೆ, ಯಾವುದೇ ಅನುದಾನವನ್ನೂ ನೀಡದೆ, ಪ್ರಕ್ರಿಯೆಯನ್ನೂ ಮಾಡಿರಲಿಲ್ಲ. ಈಗ ಮತ್ತೆ ಕಾಂಗ್ರೆಸ್ ಸರ್ಕಾರಕ್ಕೆ ಬಿಲ್ಲವ ಮುಖಂಡರು ಬೇಡಿಕೆ ಇರಿಸಿದ್ದು 500 ಕೋಟಿ ರು. ಅನುದಾನವನ್ನು ಇದೇ ಡಿಸೆಂಬರ್ ಒಳಗೆ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತ್ಯಜಿತ್ ಸುರತ್ಕಲ್, ಈ ಹಿಂದೆ ನಿಗಮ ರಚನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆವು. ಅಧಿವೇಶನದ ಸಮಯದಲ್ಲಿ ನಿಗಮ ರಚನೆ ಮಾಡಲು ತೊಡಕಾಗುತ್ತದೆ. ಅದರ ಬಳಿಕ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ಚಳಿಗಾಲದ ಅಧಿವೇಶನ ಮುಗಿದು 15 ದಿನಗಳ ಒಳಗೆ ನಾರಾಯಣ ಗುರು ನಿಗಮ ರಚನೆ ಮಾಡಬೇಕು. ಇಲ್ಲದಿದ್ದರೆ ಜ.1 ರ ನಂತರ ಸಮಾಜದ ಎಲ್ಲ ಸ್ವಾಮೀಜಿಗಳು, ಸಂಘ ಸಂಸ್ಥೆಗಳು, ಸಂಘಟನೆಗಳು, ಕ್ಷೇತ್ರದ ಪ್ರಮುಖರನ್ನು ಒಗ್ಗೂಡಿಸಿ ಬೀದಿಗಿಳಿದು ಜನಾಂದೋಲನ ರೂಪಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ನಾರಾಯಣ ಗುರು ಜಯಂತಿ ವೇಳೆ ಅನುದಾನ ಘೋಷಿಸಬಹುದೆಂಬ ನಿರೀಕ್ಷೆಯಿತ್ತು. ಆದರೆ ಅದೂ ಹುಸಿಯಾಗಿದೆ. ಇತ್ತೀಚೆಗೆ ನಡೆದ ಸಮುದಾಯದ ಸಭೆಯಲ್ಲಿ ಸಮಾಜದ ಎಲ್ಲಾ ನಾಯಕರು ಈ ಬಗ್ಗೆ ಬೇಡಿಕೆ ಇಟ್ಟಿದ್ದರು. ಆದರೆ ಅಧಿವೇಶನದಲ್ಲಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಅವಕಾಶವಿಲ್ಲವೆಂದು ಸರಕಾರ ನುಣುಚಿಕೊಂಡಿದೆ. ಅಧಿವೇಶನದ ಬಳಿಕ ಸಮಾಜದ ಪ್ರಮುಖರ ಸಭೆ ಕರೆದು ಕ್ರಮ ಕೈಗೊಳ್ಳುವುದಾಗಿ ಸರಕಾರ ಹೇಳಿದೆ.
ಆದ್ದರಿಂದ ಅಧಿವೇಶನ ಮುಗಿದ ಕೂಡಲೇ ಡಿಸೆಂಬರ್ 31ರೊಳಗೆ ನಿಗಮದ ಹೆಸರಲ್ಲಿ 500 ಕೋಟಿ ರೂ. ಅನುದಾನ ನೀಡಬೇಕು. ಇಲ್ಲದಿದ್ದಲ್ಲಿ ಜ.1ರ ಬಳಿಕ ಹೋರಾಟ ಅನಿವಾರ್ಯ. ಅಲ್ಲದೆ ಕಾಂತರಾಜು ಆಯೋಗ ವರದಿ ಜಾರಿಗೊಳಿಸಬೇಕು. ಪ್ರವರ್ಗ – ಎ ಯಲ್ಲಿ ಈಗಿರುವ 102 ಜಾತಿ ಸಮುದಾಯಗಳಿಗಿರುವ 15 ಪ್ರತಿಶತ ಮೀಸಲಾತಿಯಲ್ಲಿ ಯಾವುದೇ ವ್ಯತ್ಯಾಸ ಆಗಬಾರದು ಎಂದು ಸತ್ಯಜಿತ್ ಸುರತ್ಕಲ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ರಾಕೇಶ್ ಪೂಜಾರಿ, ಶಶಿಧರ್ ಅಮೀನ್, ನವೀನ್ ಪೂಜಾರಿ ಮತ್ತಿತರರಿದ್ದರು.
Mangalore Announce 500 crores for Narayana Guru development cell warns Satyajit Surathkal.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm