ಬ್ರೇಕಿಂಗ್ ನ್ಯೂಸ್
14-12-23 10:13 pm Mangalore Correspondent ಕರಾವಳಿ
ಮಂಗಳೂರು, ಡಿ.14: ಚುನಾವಣೆಗೆ ಮೊದಲೇ ಬಿಲ್ಲವ ಸಮುದಾಯದಿಂದ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಬೇಡಿಕೆ ಇಡಲಾಗಿತ್ತು. ಬಿಜೆಪಿ ಸರಕಾರ ಕೊನೆಯ ಕ್ಷಣದಲ್ಲಿ ನಿಗಮ ರಚನೆ ಮಾಡಿ ಘೋಷಣೆ ಮಾಡಿತ್ತು. ಆದರೆ, ಯಾವುದೇ ಅನುದಾನವನ್ನೂ ನೀಡದೆ, ಪ್ರಕ್ರಿಯೆಯನ್ನೂ ಮಾಡಿರಲಿಲ್ಲ. ಈಗ ಮತ್ತೆ ಕಾಂಗ್ರೆಸ್ ಸರ್ಕಾರಕ್ಕೆ ಬಿಲ್ಲವ ಮುಖಂಡರು ಬೇಡಿಕೆ ಇರಿಸಿದ್ದು 500 ಕೋಟಿ ರು. ಅನುದಾನವನ್ನು ಇದೇ ಡಿಸೆಂಬರ್ ಒಳಗೆ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತ್ಯಜಿತ್ ಸುರತ್ಕಲ್, ಈ ಹಿಂದೆ ನಿಗಮ ರಚನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆವು. ಅಧಿವೇಶನದ ಸಮಯದಲ್ಲಿ ನಿಗಮ ರಚನೆ ಮಾಡಲು ತೊಡಕಾಗುತ್ತದೆ. ಅದರ ಬಳಿಕ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ಚಳಿಗಾಲದ ಅಧಿವೇಶನ ಮುಗಿದು 15 ದಿನಗಳ ಒಳಗೆ ನಾರಾಯಣ ಗುರು ನಿಗಮ ರಚನೆ ಮಾಡಬೇಕು. ಇಲ್ಲದಿದ್ದರೆ ಜ.1 ರ ನಂತರ ಸಮಾಜದ ಎಲ್ಲ ಸ್ವಾಮೀಜಿಗಳು, ಸಂಘ ಸಂಸ್ಥೆಗಳು, ಸಂಘಟನೆಗಳು, ಕ್ಷೇತ್ರದ ಪ್ರಮುಖರನ್ನು ಒಗ್ಗೂಡಿಸಿ ಬೀದಿಗಿಳಿದು ಜನಾಂದೋಲನ ರೂಪಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ನಾರಾಯಣ ಗುರು ಜಯಂತಿ ವೇಳೆ ಅನುದಾನ ಘೋಷಿಸಬಹುದೆಂಬ ನಿರೀಕ್ಷೆಯಿತ್ತು. ಆದರೆ ಅದೂ ಹುಸಿಯಾಗಿದೆ. ಇತ್ತೀಚೆಗೆ ನಡೆದ ಸಮುದಾಯದ ಸಭೆಯಲ್ಲಿ ಸಮಾಜದ ಎಲ್ಲಾ ನಾಯಕರು ಈ ಬಗ್ಗೆ ಬೇಡಿಕೆ ಇಟ್ಟಿದ್ದರು. ಆದರೆ ಅಧಿವೇಶನದಲ್ಲಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಅವಕಾಶವಿಲ್ಲವೆಂದು ಸರಕಾರ ನುಣುಚಿಕೊಂಡಿದೆ. ಅಧಿವೇಶನದ ಬಳಿಕ ಸಮಾಜದ ಪ್ರಮುಖರ ಸಭೆ ಕರೆದು ಕ್ರಮ ಕೈಗೊಳ್ಳುವುದಾಗಿ ಸರಕಾರ ಹೇಳಿದೆ.
ಆದ್ದರಿಂದ ಅಧಿವೇಶನ ಮುಗಿದ ಕೂಡಲೇ ಡಿಸೆಂಬರ್ 31ರೊಳಗೆ ನಿಗಮದ ಹೆಸರಲ್ಲಿ 500 ಕೋಟಿ ರೂ. ಅನುದಾನ ನೀಡಬೇಕು. ಇಲ್ಲದಿದ್ದಲ್ಲಿ ಜ.1ರ ಬಳಿಕ ಹೋರಾಟ ಅನಿವಾರ್ಯ. ಅಲ್ಲದೆ ಕಾಂತರಾಜು ಆಯೋಗ ವರದಿ ಜಾರಿಗೊಳಿಸಬೇಕು. ಪ್ರವರ್ಗ – ಎ ಯಲ್ಲಿ ಈಗಿರುವ 102 ಜಾತಿ ಸಮುದಾಯಗಳಿಗಿರುವ 15 ಪ್ರತಿಶತ ಮೀಸಲಾತಿಯಲ್ಲಿ ಯಾವುದೇ ವ್ಯತ್ಯಾಸ ಆಗಬಾರದು ಎಂದು ಸತ್ಯಜಿತ್ ಸುರತ್ಕಲ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ರಾಕೇಶ್ ಪೂಜಾರಿ, ಶಶಿಧರ್ ಅಮೀನ್, ನವೀನ್ ಪೂಜಾರಿ ಮತ್ತಿತರರಿದ್ದರು.
Mangalore Announce 500 crores for Narayana Guru development cell warns Satyajit Surathkal.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm