ಬ್ರೇಕಿಂಗ್ ನ್ಯೂಸ್
15-12-23 11:58 am Mangalore Correspondent ಕರಾವಳಿ
ಮಂಗಳೂರು, ಡಿ.15: ಬಂದರು ನಗರಿ ಮಂಗಳೂರಿನಿಂದ ಹೊರಟಿದ್ದ ಹಡಗಿನ ಮೇಲೆ ಯೆಮೆನ್ ದೇಶದ ಹೌತಿ ಬಂಡುಕೋರರು ಕ್ಷಿಪಣಿ ದಾಳಿ ನಡೆಸಿದ್ದಾರೆ. ವೈಮಾನಿಕ ಇಂಧನವನ್ನು ಹೊತ್ತು ನೆದರ್ಲೆಂಡ್ ಅಥವಾ ಸ್ವೀಡನ್ ಕಡೆಗೆ ತೆರಳುತ್ತಿದ್ದ ತೈಲ ಟ್ಯಾಂಕರುಗಳಿದ್ದ ಹಡಗಿನ ಮೇಲೆ ಯೆಮೆನ್ ಸಮೀಪ ಕ್ಷಿಪಣಿ ದಾಳಿ ನಡೆಸಲಾಗಿದೆ.
ಮಂಗಳೂರಿನ ಎಂಆರ್ಪಿಎಲ್ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಖರೀದಿಸಿ ನೆದರ್ಲೆಂಡ್ಗೆ ಸಾಗಾಟ ಮಾಡುತ್ತಿದ್ದಾಗ ಡಿ.11ರಂದು ಘಟನೆ ಸಂಭವಿಸಿದೆ. ಹಡಗಿಗೆ ಡಿ. 6ರಂದು ಮಂಗಳೂರಿನಲ್ಲಿ ತೈಲ ಸಂಗ್ರಹ ಮಾಡಲಾಗಿತ್ತು. ಹೌತಿ ಬಂಡುಕೋರರ ಗುರಿ ತಪ್ಪಿದ ಪರಿಣಾಮ ಹಡಗಿಗೆ ಯಾವುದೇ ಅಪಾಯವಾಗಿಲ್ಲ. ಹಡಗಿನಲ್ಲಿ ಶಸ್ತ್ರ ಸಜ್ಜಿತ ಸಿಬಂದಿಯಿದ್ದು ಮರು ದಾಳಿ ನಡೆಸಿದ್ದಾರೆ ಎಂದು ಹಡಗು ಕಂಪನಿ ತಿಳಿಸಿದೆ.
ಯೆಮೆನ್ ದೇಶದ ಹೌತಿ ಬಂಡುಕೋರರ ಅಧೀನದಲ್ಲಿರುವ ಬಾಬ್ ಎಲ್-ಮಂಡೆಬ್ ಕರಾವಳಿ ಭಾಗದಿಂದ ಕ್ಷಿಪಣಿ ದಾಳಿ ನಡೆದಿದೆ. ಸುಯೆಜ್ ಕಾಲುವೆ ಮೂಲಕ ಐರೋಪ್ಯ ದೇಶಗಳತ್ತ ಸಾಗುವ ತೈಲ ಟ್ಯಾಂಕರ್ ಹೊಂದಿರುವ ಹಡಗಿನ ಮೇಲೆ ಮೊದಲ ಬಾರಿಗೆ ಇಂತಹ ದಾಳಿ ನಡೆದಿದೆ. ಹೌತಿ ಬಂಡುಕೋರರಿಗೆ ಸೇರಿದ ಡ್ರೋಣ್ ಅನ್ನು ಅಮೆರಿಕದ ಮಿಲಿಟರಿ ಪಡೆ ಹೊಡೆದುರುಳಿಸಿದ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.
ಹಡಗು ಆರ್ಡ್ ಮೋರ್ ಶಿಪ್ಪಿಂಗ್ ಕಾರ್ಪೊರೇಶನ್ ಎಂಬ ಕಂಪನಿಗೆ ಸೇರಿದ್ದಾಗಿದೆ. ಜೆಟ್ ಇಂಧನವು ಶೆಲ್ ಮತ್ತು ಭಾರತದ ಒಎನ್ ಜಿಸಿ ಜಂಟಿ ಸಹಭಾಗಿತ್ವದ ಕಂಪನಿಗೆ ಸೇರಿದ್ದು ಐರೋಪ್ಯ ದೇಶಗಳಿಗೆ ಪೂರೈಸುವ ದೃಷ್ಟಿಯಿಂದ ಸಾಗಿಸುತ್ತಿದ್ದರು. ಒಂದೆಡೆ ಇಸ್ರೇಲ್ ವಿರುದ್ಧ ಹೌತಿ ಬಂಡುಕೋರರು ದಾಳಿ ಬೆದರಿಕೆ ಹಾಕಿರುವಾಗಲೇ ಕ್ಷಿಪಣಿ ದಾಳಿ ನಡೆದಿರುವುದು ಆತಂಕ ಮೂಡಿಸಿದೆ.
ಮಂಗಳೂರಿನ ಎಂಆರ್ಪಿಎಲ್ನಿಂದ ಶೆಲ್ ಸಹಿತ ವಿವಿಧ ಕಂಪೆನಿಯವರು ಜೆಟ್ ತೈಲವನ್ನು ಖರೀದಿಸಿ ಹಡಗಿನಲ್ಲಿ ಸಾಗಾಟ ಮಾಡುತ್ತಾರೆ. ಬೇರೆ ಬೇರೆ ದೇಶಗಳಿಗೆ ಮಾರುಕಟ್ಟೆ ಆಧಾರಿತವಾಗಿ ಸಾಗಿಸಿ ಮಾರಾಟ ಮಾಡುತ್ತಾರೆ ಎಂದು ಎಂಆರ್ಪಿಎಲ್ ಮೂಲಗಳು ತಿಳಿಸಿವೆ.
In a dramatic incident near the key Bab el-Mandeb Strait, an oil tanker hailing from Mangalore, India, managed to evade two missiles fired by Yemen's Houthi rebels. The Marshall Islands-flagged tanker, Ardmore Encounter, was carrying a shipment of Indian-manufactured jet fuel destined for either Rotterdam in the Netherlands or Gavle, Sweden, reported The Associated Press.
24-04-25 10:13 pm
HK News Desk
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
25-04-25 02:54 pm
HK News Desk
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm