ಬ್ರೇಕಿಂಗ್ ನ್ಯೂಸ್
17-12-23 03:19 pm Mangalore Correspondent ಕರಾವಳಿ
ಉಳ್ಳಾಲ, ಡಿ.17: ಮಾಲಿಗಪ್ಪುರಂ ಮಳಯಾಲಂ ಹಿಟ್ ಚಿತ್ರದ ಬಾಲನಟಿ ಬೇಬಿ ದೇವಾನಂದ್ ಅವರು ಕಲ್ಲಾಪು ಬುರ್ದುಗೋಳಿಯ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ತನ್ನ ನಟನೆಯ ಹೊಸ ಚಿತ್ರ "ಗುಳಿಗನ್" ಯಶಸ್ಸಿಗೆ ಪ್ರಾರ್ಥಿಸಿದರು.
ಸೋಮೇಶ್ವರದಲ್ಲಿ ನಡೆದ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಬೇಬಿ ದೇವಾನಂದ ಅವರು ತಂದೆ ಜಿಬಿನ್ ಜೊತೆ ಬುರ್ದುಗೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು. ತನ್ನ ಹನ್ನೊಂದನೇ ವಯಸ್ಸಿನಲ್ಲಿ ದೇಶ, ವಿದೇಶಗಳಲ್ಲಿ ನಡೆದ ಚಿತ್ರೀಕರಣಗಳಲ್ಲಿ ನಟಿಸಿರುವ ಕೀರ್ತಿ ಬೇಬಿ ದೇವನಂದರದ್ದು.


ಸುಮಾರು 14 ಚಿತ್ರಗಳಲ್ಲಿ ಅಭಿನಯಿಸಿರುವ ಬೇಬಿ ದೇವಾನಂದ್ ಕಳೆದ ವರುಷ ತೆರೆ ಕಂಡ"ಮಾಲಿಗಪ್ಪುರಂ" ಎಂಬ ಅಯ್ಯಪ್ಪ ಭಕ್ತಿ ಪ್ರಧಾನ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದು ಚಿತ್ರವು ಸೂಪರ್ ಹಿಟ್ ಆಗಿತ್ತು. ದೇವಾನಂದ್ ಸಾಲು, ಸಾಲು ಚಿತ್ರಗಳಲ್ಲಿ ಅಭಿನಯಿಸಲು ಆಫರ್ ಬಂದಿದ್ದು ಆಕೆಯ ನಟನೆಯ ಮುಂದಿನ ಚಿತ್ರ "ಗುಳಿಗನ್" ಯಶಸ್ಸಿಗಾಗಿ ಕರಾವಳಿಯ ಕಾರಣೀಕ ಶಕ್ತಿಗಳಾದ ಕೊರಗಜ್ಜ- ಗುಳಿಗ ದೈವಗಳಲ್ಲಿ ಬಾಲನಟಿ ಪ್ರಾರ್ಥನೆ ಸಲ್ಲಿಸಿದಳು. ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗಳು ಬಾಲನಟಿಯನ್ನು ಸನ್ಮಾನಿಸಿ ಗೌರವಿಸಿದರು.ಬುರ್ದುಗೋಳಿ ಕ್ಷೇತ್ರದ ಕುರಿತಾಗಿ ಪೂಜಾ ಸನಿಲ್ ಕಂಠದಾನದಲ್ಲಿ ರಚನೆಯಾದ ನೂತನ ಭಕ್ತಿಗೀತೆಯ ಧ್ವನಿ ಸುರುಳಿಯನ್ನ ಈ ವೇಳೆ ಬಿಡುಗಡೆ ಮಾಡಲಾಯಿತು. ಹಾಲುಗೆನ್ನೆಯ ಮುದ್ದಾದ ಮಲಯಾಳಿ ಬಾಲ ನಟಿಯ ಜತೆಗೆ ಸ್ಥಳೀಯರು ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು.


ಬುರ್ದುಗೋಳಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ , ಗೌರವ ಸಲಹೆಗಾರರಾದ ಚಂದ್ರಹಾಸ್ ಪಂಡಿತ್ ಹೌಸ್, ಗೌರವ ಅಧ್ಯಕ್ಷರಾದ ಸಂಜೀವ ಭಂಡಾರಿ, ಪ್ರಮುಖರಾದ ದೇವದಾಸ್ ಕಾಯಂಗಲ, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.
Malikappuram Malayalam movie child actress Kallu Deva Nandha visits Kallapu Burdugoli Koragajja Temple at Ullal in Mangalore
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm