ಬ್ರೇಕಿಂಗ್ ನ್ಯೂಸ್
17-12-23 03:19 pm Mangalore Correspondent ಕರಾವಳಿ
ಉಳ್ಳಾಲ, ಡಿ.17: ಮಾಲಿಗಪ್ಪುರಂ ಮಳಯಾಲಂ ಹಿಟ್ ಚಿತ್ರದ ಬಾಲನಟಿ ಬೇಬಿ ದೇವಾನಂದ್ ಅವರು ಕಲ್ಲಾಪು ಬುರ್ದುಗೋಳಿಯ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ತನ್ನ ನಟನೆಯ ಹೊಸ ಚಿತ್ರ "ಗುಳಿಗನ್" ಯಶಸ್ಸಿಗೆ ಪ್ರಾರ್ಥಿಸಿದರು.
ಸೋಮೇಶ್ವರದಲ್ಲಿ ನಡೆದ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಬೇಬಿ ದೇವಾನಂದ ಅವರು ತಂದೆ ಜಿಬಿನ್ ಜೊತೆ ಬುರ್ದುಗೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು. ತನ್ನ ಹನ್ನೊಂದನೇ ವಯಸ್ಸಿನಲ್ಲಿ ದೇಶ, ವಿದೇಶಗಳಲ್ಲಿ ನಡೆದ ಚಿತ್ರೀಕರಣಗಳಲ್ಲಿ ನಟಿಸಿರುವ ಕೀರ್ತಿ ಬೇಬಿ ದೇವನಂದರದ್ದು.


ಸುಮಾರು 14 ಚಿತ್ರಗಳಲ್ಲಿ ಅಭಿನಯಿಸಿರುವ ಬೇಬಿ ದೇವಾನಂದ್ ಕಳೆದ ವರುಷ ತೆರೆ ಕಂಡ"ಮಾಲಿಗಪ್ಪುರಂ" ಎಂಬ ಅಯ್ಯಪ್ಪ ಭಕ್ತಿ ಪ್ರಧಾನ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದು ಚಿತ್ರವು ಸೂಪರ್ ಹಿಟ್ ಆಗಿತ್ತು. ದೇವಾನಂದ್ ಸಾಲು, ಸಾಲು ಚಿತ್ರಗಳಲ್ಲಿ ಅಭಿನಯಿಸಲು ಆಫರ್ ಬಂದಿದ್ದು ಆಕೆಯ ನಟನೆಯ ಮುಂದಿನ ಚಿತ್ರ "ಗುಳಿಗನ್" ಯಶಸ್ಸಿಗಾಗಿ ಕರಾವಳಿಯ ಕಾರಣೀಕ ಶಕ್ತಿಗಳಾದ ಕೊರಗಜ್ಜ- ಗುಳಿಗ ದೈವಗಳಲ್ಲಿ ಬಾಲನಟಿ ಪ್ರಾರ್ಥನೆ ಸಲ್ಲಿಸಿದಳು. ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗಳು ಬಾಲನಟಿಯನ್ನು ಸನ್ಮಾನಿಸಿ ಗೌರವಿಸಿದರು.ಬುರ್ದುಗೋಳಿ ಕ್ಷೇತ್ರದ ಕುರಿತಾಗಿ ಪೂಜಾ ಸನಿಲ್ ಕಂಠದಾನದಲ್ಲಿ ರಚನೆಯಾದ ನೂತನ ಭಕ್ತಿಗೀತೆಯ ಧ್ವನಿ ಸುರುಳಿಯನ್ನ ಈ ವೇಳೆ ಬಿಡುಗಡೆ ಮಾಡಲಾಯಿತು. ಹಾಲುಗೆನ್ನೆಯ ಮುದ್ದಾದ ಮಲಯಾಳಿ ಬಾಲ ನಟಿಯ ಜತೆಗೆ ಸ್ಥಳೀಯರು ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು.


ಬುರ್ದುಗೋಳಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ , ಗೌರವ ಸಲಹೆಗಾರರಾದ ಚಂದ್ರಹಾಸ್ ಪಂಡಿತ್ ಹೌಸ್, ಗೌರವ ಅಧ್ಯಕ್ಷರಾದ ಸಂಜೀವ ಭಂಡಾರಿ, ಪ್ರಮುಖರಾದ ದೇವದಾಸ್ ಕಾಯಂಗಲ, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.
Malikappuram Malayalam movie child actress Kallu Deva Nandha visits Kallapu Burdugoli Koragajja Temple at Ullal in Mangalore
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm