ಬ್ರೇಕಿಂಗ್ ನ್ಯೂಸ್
19-12-23 11:13 am Mangalore Correspondent ಕರಾವಳಿ
ಉಳ್ಳಾಲ, ಡಿ.19: ಸೋಮೇಶ್ವರ ಕಡಲ ತೀರದಲ್ಲಿ ಇಂದು ಬೆಳಗ್ಗೆ ಮಹೇಶ್ ಟ್ರಾವೆಲ್ಸ್ ಬಸ್ ಚಾಲಕನ ಮೃತದೇಹ ಸಿಕ್ಕಿದ್ದು, ರುದ್ರಪಾದೆಯಿಂದ ಜಿಗಿದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕೋಟೆಕಾರು ಪಟ್ಟಣದ ಕೊಂಡಾಣ, ವಿದ್ಯಾನಗರ ನಿವಾಸಿ ಜಗದೀಶ್ ಶೆಟ್ಟಿ(38)ಮೃತ ವ್ಯಕ್ತಿ. ಜಗದೀಶ್ ಅವರು 43 ರೂಟ್ ಸಂಖ್ಯೆಯ ಮಂಗಳೂರು- ತಲಪಾಡಿಯ ನಡುವೆ ಓಡಾಟ ನಡೆಸುತ್ತಿದ್ದ ಖಾಸಗಿ ಬಸ್ ಮಹೇಶ್ ಟ್ರಾವೆಲ್ಸ್ ನಲ್ಲಿ ಚಾಲಕರಾಗಿದ್ದರು. ಜಗದೀಶ್ ನಿನ್ನೆ ರಾತ್ರಿ ಮನೆಗೆ ತೆರಳದೆ ನಾಪತ್ತೆಯಾಗಿದ್ದರು.
ಇಂದು ಬೆಳಗ್ಗೆ ಜಗದೀಶ್ ಅವರ ಮೃತದೇಹ ಸೋಮೇಶ್ವರ ಕಡಲಲ್ಲಿ ತೇಲುತ್ತಿದ್ದು ಸ್ಥಳೀಯ ಮೀನುಗಾರರು ಅದನ್ನ ಎಳೆದು ದಡಕ್ಕೆ ಹಾಕಿದ್ದಾರೆ. ರುದ್ರಪಾದೆಯಲ್ಲಿ ಜಗದೀಶ್ ಅವರು ಧರಿಸಿದ್ದ ಚಪ್ಪಲ್, ಮೊಬೈಲ್, ಬೈಕ್ ಕೀ ಗೊಂಚಲು ದೊರಕಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮಹೇಶ್ ಟ್ರಾವೆಲ್ಸ್ ಬಸ್ಸು ಮಾಲಕ ಪ್ರಕಾಶ್ ಶೇಖ ಕೂಡ ಕೆಲ ತಿಂಗಳ ಹಿಂದಷ್ಟೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಮಹೇಶ್ ಟ್ರಾವೆಲ್ಸಲ್ಲೇ ಕ್ಲೀನರ್, ನಿರ್ವಾಹಕ ವೃತ್ತಿ ಮಾಡಿ ಕಳೆದ ಹಲವು ವರುಷಗಳಿಂದ ಚಾಲಕರಾಗಿದ್ದ ಜಗದೀಶ್ ಆತ್ಮಹತ್ಯೆಗೈದಿರುವುದು ಅವರ ಮನೆ ಮಂದಿ, ಸ್ನೇಹಿತರನ್ನ ಆಘಾತಗೊಳಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಗದೀಶ್ ತಂದೆ ವೆಂಕಪ್ಪ ಶೆಟ್ಟಿ ಅಸೌಖ್ಯದಿಂದ ಬಳಲುತ್ತಿದ್ದು ಮೂರು ದಿನಗಳ ಹಿಂದೆ ದೇರಳಕಟ್ಟೆಯ ಕೆ.ಎಸ್ .ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅದೇ ಆಸ್ಪತ್ರೆಗೆ ಮಗನ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಮೃತ ಜಗದೀಶ್ ಅವಿವಾಹಿತರಾಗಿದ್ದು ತಾಯಿ, ತಂದೆ ಇಬ್ಬರು ಅಣ್ಣಂದಿರನ್ನ ಅಗಲಿದ್ದಾರೆ.
Mahesh bus Travels driver commits suicide at Someshwar Beach in Mangalore. The deceased has been identifed as Jagadish Shetty (48). Ullal police are at the spot.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm