ಬ್ರೇಕಿಂಗ್ ನ್ಯೂಸ್
19-12-23 11:13 am Mangalore Correspondent ಕರಾವಳಿ
ಉಳ್ಳಾಲ, ಡಿ.19: ಸೋಮೇಶ್ವರ ಕಡಲ ತೀರದಲ್ಲಿ ಇಂದು ಬೆಳಗ್ಗೆ ಮಹೇಶ್ ಟ್ರಾವೆಲ್ಸ್ ಬಸ್ ಚಾಲಕನ ಮೃತದೇಹ ಸಿಕ್ಕಿದ್ದು, ರುದ್ರಪಾದೆಯಿಂದ ಜಿಗಿದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕೋಟೆಕಾರು ಪಟ್ಟಣದ ಕೊಂಡಾಣ, ವಿದ್ಯಾನಗರ ನಿವಾಸಿ ಜಗದೀಶ್ ಶೆಟ್ಟಿ(38)ಮೃತ ವ್ಯಕ್ತಿ. ಜಗದೀಶ್ ಅವರು 43 ರೂಟ್ ಸಂಖ್ಯೆಯ ಮಂಗಳೂರು- ತಲಪಾಡಿಯ ನಡುವೆ ಓಡಾಟ ನಡೆಸುತ್ತಿದ್ದ ಖಾಸಗಿ ಬಸ್ ಮಹೇಶ್ ಟ್ರಾವೆಲ್ಸ್ ನಲ್ಲಿ ಚಾಲಕರಾಗಿದ್ದರು. ಜಗದೀಶ್ ನಿನ್ನೆ ರಾತ್ರಿ ಮನೆಗೆ ತೆರಳದೆ ನಾಪತ್ತೆಯಾಗಿದ್ದರು.
ಇಂದು ಬೆಳಗ್ಗೆ ಜಗದೀಶ್ ಅವರ ಮೃತದೇಹ ಸೋಮೇಶ್ವರ ಕಡಲಲ್ಲಿ ತೇಲುತ್ತಿದ್ದು ಸ್ಥಳೀಯ ಮೀನುಗಾರರು ಅದನ್ನ ಎಳೆದು ದಡಕ್ಕೆ ಹಾಕಿದ್ದಾರೆ. ರುದ್ರಪಾದೆಯಲ್ಲಿ ಜಗದೀಶ್ ಅವರು ಧರಿಸಿದ್ದ ಚಪ್ಪಲ್, ಮೊಬೈಲ್, ಬೈಕ್ ಕೀ ಗೊಂಚಲು ದೊರಕಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮಹೇಶ್ ಟ್ರಾವೆಲ್ಸ್ ಬಸ್ಸು ಮಾಲಕ ಪ್ರಕಾಶ್ ಶೇಖ ಕೂಡ ಕೆಲ ತಿಂಗಳ ಹಿಂದಷ್ಟೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಮಹೇಶ್ ಟ್ರಾವೆಲ್ಸಲ್ಲೇ ಕ್ಲೀನರ್, ನಿರ್ವಾಹಕ ವೃತ್ತಿ ಮಾಡಿ ಕಳೆದ ಹಲವು ವರುಷಗಳಿಂದ ಚಾಲಕರಾಗಿದ್ದ ಜಗದೀಶ್ ಆತ್ಮಹತ್ಯೆಗೈದಿರುವುದು ಅವರ ಮನೆ ಮಂದಿ, ಸ್ನೇಹಿತರನ್ನ ಆಘಾತಗೊಳಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಗದೀಶ್ ತಂದೆ ವೆಂಕಪ್ಪ ಶೆಟ್ಟಿ ಅಸೌಖ್ಯದಿಂದ ಬಳಲುತ್ತಿದ್ದು ಮೂರು ದಿನಗಳ ಹಿಂದೆ ದೇರಳಕಟ್ಟೆಯ ಕೆ.ಎಸ್ .ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅದೇ ಆಸ್ಪತ್ರೆಗೆ ಮಗನ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಮೃತ ಜಗದೀಶ್ ಅವಿವಾಹಿತರಾಗಿದ್ದು ತಾಯಿ, ತಂದೆ ಇಬ್ಬರು ಅಣ್ಣಂದಿರನ್ನ ಅಗಲಿದ್ದಾರೆ.
Mahesh bus Travels driver commits suicide at Someshwar Beach in Mangalore. The deceased has been identifed as Jagadish Shetty (48). Ullal police are at the spot.
02-01-26 01:58 pm
Bangalore Correspondent
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm