ಬ್ರೇಕಿಂಗ್ ನ್ಯೂಸ್
19-12-23 11:27 am Mangalore Correspondent ಕರಾವಳಿ
ಪುತ್ತೂರು, ಡಿ.19: ಸೊಸೈಟಿ ಚುನಾವಣೆಯಲ್ಲಿ ಪ್ರಚಾರಕ್ಕೆ ಹೋಗಿಲ್ಲವೆಂದು ವಿಜಯೋತ್ಸವ ನಡೆಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ದಲಿತ ಯುವಕನ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಚಾರ್ವಾಕ ಗ್ರಾಮದಲ್ಲಿ ನಡೆದಿದೆ.
ಚಾರ್ವಾಕ ಗ್ರಾಮದ ಕಡಬ ನಿವಾಸಿ ಮನೋಹರ ಬಿ (24) ಹಲ್ಲೆಗೀಡಾದವರು. ಡಿ.17ರಂದು ರಾತ್ರಿ ಮನೋಹರ್ ತನ್ನ ಮನೆಯಲ್ಲಿದ್ದಾಗ ಅಂಗಳಕ್ಕೆ ಬಂದ ಆರೋಪಿತರಾದ ಗಣೇಶ ಉದನಡ್ಕ, ರಾಧಾಕೃಷ್ಣ ಮುದ್ವ , ಅಖೀಲ್ ಬೊಮ್ಮಳಿಕೆ, ಉಮೇಶ್ ಬಿರೋಳಿಕೆ, ಯಶೋಧರ ಬಿರೋಳಿಕೆ ಹಾಗೂ ಇತರರು ಬಂದು ಜಾತಿನಿಂದನೆ ಮಾಡಿ ಅವಾಚ್ಯವಾಗಿ ಬೈದಿದ್ದಾರೆ. ಬಳಿಕ ಮನೋಹರ್ ಅವರ ಮೇಲೆ ಮರದ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ತಾಯಿ ಲಲಿತಾರವರು ರಕ್ತದದೊತ್ತಡ ಕಡಿಮೆಯಾಗಿ ಕುಸಿದು ಬಿದ್ದಿದ್ದಾರೆ.
ಈ ವೇಳೆ ನೆರೆಮನೆಯವರು ಬರುವುದನ್ನು ಕಂಡ ಆರೋಪಿಗಳು ಪಿರ್ಯಾದುದಾರರಿಗೆ ಜೀವ ಬೆದರಿಕೆ ಹಾಕಿ ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ 107/2023 ಕಲಂ: 143,147,447,504,323,324,506,149 ಹಾಗೂ SC & ST act 2015 u/s-3(1) (r) (s), 3 (2) (va)) ರಂತೆ ಪ್ರಕರಣ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಖಿಲ್ ಎಂಬಾತನ ಬಂಧನವಾಗಿದ್ದು, ಉಳಿದವರು ತಲೆಮೆರೆಸಿಕೊಂಡಿದ್ದಾರೆ.
ಚಾರ್ವಾಕ ಸೇವಾ ಸಹಕಾರಿ ಸಂಘದ ಚುನಾವಣೆ ನಡೆದು ಅದರಲ್ಲಿ ಸಹಕಾರ ಭಾರತಿ ಬೆಂಬಲಿತ ಗಣೇಶ್ ಉದನಡ್ಕ ತಂಡ ಬಹುಮತ ಪಡೆದಿತ್ತು. ಆ ನಂತರ ನಡೆದ ವಿಜಯೋತ್ಸವದಲ್ಲಿ ವಿರೋಧವಾಗಿ ಸ್ಪರ್ಧಿಸಿದ ಮತ್ತು ಅವರಿಗೆ ಬೆಂಬಲಿಸಿದವರ ಮನೆ ಬಳಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅದೇ ವೇಳೆ, ಮನೋಹರ್ ಮನೆಗೆ ನುಗ್ಗಿ ಹಲ್ಲೆ ನಡೆಸಲಾಗಿದೆ. ಚುನಾವಣೆಯಲ್ಲಿ ಮನೋಹರ್ ಕಾಂಗ್ರೆಸ್ ಸದಸ್ಯರಿಗೆ ಬೆಂಬಲ ನೀಡಿದ್ದ ಎನ್ನಲಾಗುತ್ತಿದೆ.
ಆರೋಪಿ ಗಣೇಶ್ ಉದನಡ್ಕ ರೌಡಿ ಶೀಟರ್ ಆಗಿದ್ದು ಕೆಲವು ವರ್ಷಗಳ ಹಿಂದೆ ಗ್ರಾಮ ಪಂಚಾಯತ್ ಸದಸ್ಯೆಗೆ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ. ಇದೀಗ ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ.
Bjp workers barged into the house of a Dalit youth and attacked him at Charvaka village in Kadaba taluk when he was celebrating his victory for not campaigning in the society elections.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm