ಬ್ರೇಕಿಂಗ್ ನ್ಯೂಸ್
20-12-23 10:18 pm Mangalore Correspondent ಕರಾವಳಿ
ಬಂಟ್ವಾಳ, ಡಿ.20: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಾಲದ ಬಡ್ಡಿ ವಿಚಾರದಲ್ಲಿ ಯೋಜನೆಯ ಸದಸ್ಯರು ಮತ್ತು ಸೌಜನ್ಯಾ ಪರ ಹೋರಾಟಗಾರರ ತಂಡದ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಸಜಿಪಮುನ್ನೂರಿನಲ್ಲಿ ನಡೆದಿದೆ.
ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರಾದ ಸಜಿಪಮುನ್ನೂರಿನ ಬೇಬಿ ಎಂಬವರ ಮನೆಯಲ್ಲಿ ಮಂಗಳವಾರ ಸಂಜೆ 25ರಷ್ಟು ಮಹಿಳೆಯರು ಮತ್ತು ಕೆಲವು ಪುರುಷರು ಸೇರಿದ್ದರು. ಸೌಜನ್ಯಾ ಪರ ಹೋರಾಟದಲ್ಲಿರುವ ಕಾರ್ಕಳದ ಸಾಣೂರಿನಿಂದ ಬಂದಿದ್ದ ಶೈಲಜಾ ಶೆಟ್ಟಿ, ಯೋಗೀಶ್ ಶೆಟ್ಟಿ, ಮುಡಿಪು ರವೀಂದ್ರ ಶೆಟ್ಟಿ, ಕೃಷ್ಣ ಸರಪಾಡಿ, ಗಣೇಶ್ ಕಂಟಲ್ಪಾಡಿ ಎಂಬವರು ಬೇಬಿ ಎಂಬವರ ಮನೆಗೆ ಬಂದಿದ್ದರು. ಈ ವೇಳೆ, ಸಾಲದಲ್ಲಿ ಬಡ್ಡಿ ಎಷ್ಟು ಕಟ್ಟುತ್ತೀರಿ ಎಂಬ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿತ್ತು.
ಶೈಲಜಾ ಶೆಟ್ಟಿ ಗ್ರಾಮಾಭಿವೃದ್ಧಿ ಯೋಜನೆ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ, ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಅಲ್ಲಿದ್ದವರು ತಕರಾರು ತೆಗೆದಿದ್ದಾರೆ. ಶೈಲಜಾ ಮತ್ತು ಅವರ ಜೊತೆಗೆ ತೆರಳಿದ್ದವರನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆಂದು ರವೀಂದ್ರ ಶೆಟ್ಟಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ, ಕೆಲವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ರವೀಂದ್ರ ಶೆಟ್ಟಿ ಈ ಹಿಂದೆ ಗ್ರಾಮಾಭಿವೃದ್ಧಿ ಯೋಜನೆಯಲ್ಲಿದ್ದು ಈಗ ಆ ಕೆಲಸ ಬಿಟ್ಟು ಸೌಜನ್ಯಾ ಪರ ಹೋರಾಟದಲ್ಲಿ ತೊಡಗಿಸಿದ್ದಾರೆ.
ಸದರಿ ಘಟನೆಗೆ ಸಂಬಂಧಿಸಿ ಬೇಬಿ ಅವರು ಪ್ರತಿ ದೂರು ನೀಡಿದ್ದು, ತನ್ನ ಮನೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರ ಸಭೆ ನಡೆಯತ್ತಿದ್ದಾಗ ಶೈಲಜಾ ಶೆಟ್ಟಿ, ಗಣೇಶ್ ಕಂಟಲ್ಪಾಡಿ, ಕೃಷ್ಣ ಸರಪಾಡಿ, ರವೀಂದ್ರ ಶೆಟ್ಟಿ, ಯೋಗೀಶ್ ಶೆಟ್ಟಿ ಬಂದು ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಕರಾರು ತೆಗೆದು ಅಲ್ಲಿದ್ದ ಸದಸ್ಯರಿಗೆ ಹಲ್ಲೆ ನಡೆಸಿದ್ದಾರೆ. ಇದರಿಂದ ಬೇಬಿ ಅವರು ಬಿಸಿ ರೋಡ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಎರಡೂ ದೂರುಗಳ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
Mangalore Sajipamunnur development members and Sowjanya case supporters fight assault over loan matter
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm