ಬ್ರೇಕಿಂಗ್ ನ್ಯೂಸ್
24-12-23 08:59 pm Mangaluru Correspondent ಕರಾವಳಿ
ಬಂಟ್ವಾಳ, ಡಿ.24: ಹಣ ಡಬ್ಬಲ್ ಆಗುತ್ತೆ ಎಂದು ದಲ್ಲಾಳಿಗಳ ಮಾತು ನಂಬಿ ಆ್ಯಪ್ ಒಂದಕ್ಕೆ ಹೂಡಿಕೆ ಮಾಡಿ ಸುಮಾರು 21 ಲಕ್ಷ ರೂಪಾಯಿ ಕಳಕೊಂಡಿದ್ದ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಎಂಬವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತರು. ವೀಟಾ ಮರೀನಾ ಅವರು ಈ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಯಾವುದೋ ಮೊಬೈಲ್ ಆ್ಯಪ್ ನಲ್ಲಿ ಹಣ ಹೂಡಿದರೆ ಡಬಲ್ ಆಗುತ್ತದೆ ಎಂದು ನಂಬಿ, ಸುಮಾರು 21 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಅವರು ಬಂಟ್ವಾಳ ಪೊಲೀಸರಿಗೂ ದೂರು ನೀಡಿದ್ದರು.
ಡಿ.23ರ ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ವೀಟಾ ಬಳಿಕ ನಾಪತ್ತೆಯಾಗಿದ್ದರು. ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದ್ದು ಫಲ್ಗುಣಿ ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಭಾನುವಾರ ಬೆಳಗ್ಗೆ ನದಿಯಲ್ಲಿ ಹುಡುಕಾಡಿದ್ದು ಶವ ಪತ್ತೆಯಾಗಿದೆ.
ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ
Money doubling, woman commits suicide after losing 21 lakhs in Bantwal Mangalore
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:19 pm
HK News Staffer
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm