ಬ್ರೇಕಿಂಗ್ ನ್ಯೂಸ್
24-12-23 08:59 pm Mangaluru Correspondent ಕರಾವಳಿ
ಬಂಟ್ವಾಳ, ಡಿ.24: ಹಣ ಡಬ್ಬಲ್ ಆಗುತ್ತೆ ಎಂದು ದಲ್ಲಾಳಿಗಳ ಮಾತು ನಂಬಿ ಆ್ಯಪ್ ಒಂದಕ್ಕೆ ಹೂಡಿಕೆ ಮಾಡಿ ಸುಮಾರು 21 ಲಕ್ಷ ರೂಪಾಯಿ ಕಳಕೊಂಡಿದ್ದ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಎಂಬವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತರು. ವೀಟಾ ಮರೀನಾ ಅವರು ಈ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದರು. ಈ ನಡುವೆ ಯಾವುದೋ ಮೊಬೈಲ್ ಆ್ಯಪ್ ನಲ್ಲಿ ಹಣ ಹೂಡಿದರೆ ಡಬಲ್ ಆಗುತ್ತದೆ ಎಂದು ನಂಬಿ, ಸುಮಾರು 21 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಅವರು ಬಂಟ್ವಾಳ ಪೊಲೀಸರಿಗೂ ದೂರು ನೀಡಿದ್ದರು.
ಡಿ.23ರ ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ವೀಟಾ ಬಳಿಕ ನಾಪತ್ತೆಯಾಗಿದ್ದರು. ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದ್ದು ಫಲ್ಗುಣಿ ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಭಾನುವಾರ ಬೆಳಗ್ಗೆ ನದಿಯಲ್ಲಿ ಹುಡುಕಾಡಿದ್ದು ಶವ ಪತ್ತೆಯಾಗಿದೆ.
ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ
Money doubling, woman commits suicide after losing 21 lakhs in Bantwal Mangalore
23-04-25 08:04 pm
Bangalore Correspondent
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 09:23 pm
Mangalore Correspondent
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm