ಬ್ರೇಕಿಂಗ್ ನ್ಯೂಸ್
24-12-23 09:42 pm Mangaluru Correspondent ಕರಾವಳಿ
ಮಂಗಳೂರು, ಡಿ.24: ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ನಾಯಕ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಬೃಜೇಶ್ ಚೌಟರು ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ಹೆಸರು ಮಾಡಿ ಸೇನೆಗೆ ಸೇರ್ಪಡೆಯಾಗಿದ್ದವರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಪದವಿಯಲ್ಲಿದ್ದಾಗ ಎನ್ ಸಿಸಿಯಲ್ಲಿ ಮಂಗಳೂರು ವಿವಿಯಲ್ಲಿ ಬೆಸ್ಟ್ ಕೇಡೆಟ್ ಎಂದು ಗುರುತಿಸಿದ್ದಲ್ಲದೆ, ದೆಹಲಿ ರಿಪಬ್ಲಿಕ್ ಪೆರೇಡ್ ನಲ್ಲಿ ಎನ್ ಸಿಸಿ ಕೇಡೆಟ್ ಆಗಿ ಪಾಲ್ಗೊಂಡಿದ್ದರು. UPSC ಆಯೋಜಿಸುವ ಕಂಬೈನ್ಡ್ ಡಿಫೆನ್ಸ್ ಸರ್ವಿಸಸ್ ಎಕ್ಸಾಮಿನೇಷನ್ (CDSE) ಪರೀಕ್ಷೆ ಹಾಗೂ SSB ಇಂಟರ್ವ್ಯೂ ನಲ್ಲಿ ತೇರ್ಗಡೆಗೊಂಡು ಚೆನ್ನೈ ಯಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA) ಯಲ್ಲಿ ತರಬೇತಿ ಪಡೆದು ಭಾರತೀಯ ಭೂ ಸೇನೆಯ ಪ್ರತಿಷ್ಠಿತ 8 ಗೋರ್ಖಾ ರೈಫಲ್ಸ್ ನ 7 ನೇ ಬಾಟಲಿಯನ್ ನಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
2011ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಊರಿಗೆ ಮರಳಿದ್ದ ಬೃಜೇಶ್ ಚೌಟ ಆರೆಸ್ಸೆಸ್ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. 2013ರಲ್ಲಿ ಯುವಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆನಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಕ್ಯಾಪ್ಟನ್ ಚೌಟ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು.
2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣಾ ಕರ್ತವ್ಯದಲ್ಲಿ ತೊಡಗಿಸಿದ್ದರು. ರಾಜ್ಯ ಬಿಜೆಪಿ ಚುನಾವಣಾ ಸಮಿತಿಯ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ.
2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವಕರನ್ನು ಕಟ್ಟಿಕೊಂಡು ಸತತ ಆರು ವರ್ಷಗಳಿಂದ ಮಂಗಳೂರು ಕಂಬಳ ಹೆಸರಲ್ಲಿ ಕಂಬಳ ನಡೆಸುತ್ತಿದ್ದಾರೆ.
ಮಂಗಳೂರು ಲಿಟ್ ಫೆಸ್ಟ್ ಆಯೋಜಕರಾಗಿ, ಸಮರ್ಥನ್ ಫೌಂಡೇಶನ್ ಟ್ರಸ್ಟಿಯಾಗಿ ಹೀಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಬೃಜೇಶ್ ಚೌಟ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಇವರಿಗೆ ಈಗ ರಾಜ್ಯ ಬಿಜೆಪಿ ಕಾರ್ಯದರ್ಶಿ ಸ್ಥಾನಕ್ಕೆ ಭಡ್ತಿ ಸಿಕ್ಕಿದ್ದು ಸೇವಾ ಕಾರ್ಯದ ವ್ಯಾಪ್ತಿ ವಿಸ್ತರಣೆಯಾಗಿದೆ.
Captain Brijesh Chowta, a retired Indian Army officer and prominent BJP youth leader in Dakshina Kannada district, has been appointed as the secretary of the Bharatiya Janata Party (BJP) Karnataka state unit.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm