ಬ್ರೇಕಿಂಗ್ ನ್ಯೂಸ್
26-12-23 01:09 pm Mangalore Correspondent ಕರಾವಳಿ
ಮಂಗಳೂರು, ಡಿ.26: ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು - ಮಡಗಾಂವ್ ಮಧ್ಯೆ ಪ್ರಾಯೋಗಿಕ ಓಡಾಟ ನಡೆಸಿದೆ. ಇಂದು ಬೆಳಗ್ಗೆ 8.30ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್ ಹೊರಟಿದೆ.
ಇಂದಿನಿಂದ ಮೂರು ದಿನ ಪ್ರಾಯೋಗಿಕ ಓಡಾಟ ನಡೆಸಲಿದೆ ಎಂದು ರೈಲ್ವೇ ಮೂಲಗಳಿಂದ ತಿಳಿದುಬಂದಿದೆ. ಮಂಗಳವಾರ ಬೆಳಗ್ಗೆ 8:30ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಟ ರೈಲು ಮಧ್ಯಾಹ್ನ 1:15ಕ್ಕೆ ಮಡಗಾಂವ್ (ಗೋವಾ) ತಲುಪಲಿದೆ. ವಾಪಾಸು ಮಧ್ಯಾಹ್ನ 1:45ಕ್ಕೆ ಮಡಗಾಂವ್ ನಿಂದ ಹೊರಟು ಸಂಜೆ 6:30ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ಇಂದು ಬೆಳಗ್ಗೆ ಪ್ರಾಯೋಗಿಕ ಓಡಾಟ ಸಂದರ್ಭದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ ಕಾಮತ್ ರೈಲಿನ ವೀಕ್ಷಣೆ ಮಾಡಿದ್ದಾರೆ.


ನೂತನ ವಂದೇ ಭಾರತ್ ರೈಲು ಚೆನ್ನೈಯಿಂದ ಹೊರಟು ಕೇರಳದ ಕೋಝಿಕೋಡ್ ಮಾರ್ಗವಾಗಿ ಸೋಮವಾರ ಸಂಜೆ ಮಂಗಳೂರು ತಲುಪಿತ್ತು. ಮಂಗಳೂರು ಸೆಂಟ್ರಲ್ ಮತ್ತು ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಡಿಸೆಂಬರ್ 30ರಿಂದ ಅಧಿಕೃತ ಓಡಾಟಕ್ಕೆ ದಕ್ಷಿಣ ರೈಲ್ವೇ ಸಜ್ಜಾಗಿದೆ. ಆದರೆ ಈ ಬಗ್ಗೆ ರೈಲ್ವೆ ಮಂಡಳಿಯಿಂದ ಅಧಿಕೃತ ಪ್ರಕಟನೆ ಹೊರಡಿಸಿಲ್ಲ.


ಮಂಗಳೂರು - ಮಡಗಾಂವ್ ಸಹಿತ ದೇಶದಲ್ಲಿ ಹೊಸತಾಗಿ ಆರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಹಾಗೂ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ನಿರ್ಮಿಸಿದ ಹೆಚ್ಚುವರಿ ಪ್ಲಾಟ್ ಫಾರಂ ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಡಿ.30ರಂದು ಉದ್ಘಾಟಿಸುವ ನಿರೀಕ್ಷೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಈ ಬಗ್ಗೆಯೂ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ.
ಸಂಸದ ನಳಿನ್ ಕುಮಾರ್ ಕಳೆದ ಒಂದು ವರ್ಷದಿಂದ ಮಂಗಳೂರು - ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲಿನ ಬಗ್ಗೆ ಹೇಳುತ್ತಲೇ ಬಂದಿದ್ದರು. ಮಂಗಳೂರು - ಗೋವಾ ಮಧ್ಯೆ ಕಳೆದ ಅಕ್ಟೋಬರ್ ತಿಂಗಳಲ್ಲಿಯೇ ರೈಲು ಸಂಚಾರ ಆಗುತ್ತೆ ಎಂದಿದ್ದರು. ಸತತ ಟೀಕೆ ಕೇಳಿಬಂದ ಬಳಿಕ ಮಂಗಳೂರಿಗೆ ವಂದೇ ಭಾರತ್ ರೈಲು ಬಂದಿದ್ದು ಇಂದು ಪ್ರಾಯೋಗಿಕ ಓಡಾಟ ನಡೆಸಿದೆ.
The Southern Railway will do the trial run of Mangaluru Central-Madgaon Vande Bharat Express on Tuesday, December 26. The train on trial run will depart from Mangaluru Central at 8.30 a.m. On the return journey, it will depart from Madgaon to Mangaluru at 1.45 p.m.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm