ಬ್ರೇಕಿಂಗ್ ನ್ಯೂಸ್
26-12-23 04:50 pm Mangalore Correspondent ಕರಾವಳಿ
ಮಂಗಳೂರು, ಡಿ.26: ಮಂಗಳೂರಿನ ಸರ್ಕಾರಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನದ ಮೂಲಕ ಪ್ರೋತ್ಸಾಹ ಹಾಗೂ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಆರಂಭಿಸುವ ನಿಟ್ಟಿನಲ್ಲಿ ಮೊದಲಿಗೆ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಅವರ ಮುತುವರ್ಜಿಯಲ್ಲಿ ಏರ್ಪಡಿಸಲಾಗಿದ್ದು ಇದೇ ಬರುವ 30ನೇ ತಾರೀಕಿನ ಶನಿವಾರ ಲಾಲ್ ಬಾಗ್ ನ ಮಣ್ಣಗುಡ್ಡೆ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಪದವಿಪೂರ್ವ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಮಾತ್ರ ಅನ್ವಯಿಸುವ ಈ ಕಾರ್ಯಕ್ರಮದಲ್ಲಿ, ಈ ಹಿಂದಿನ ಸೆಮಿಸ್ಟರ್/ಅವಧಿಯಲ್ಲಿ ತಮ್ಮ ತಮ್ಮ ವಿಷಯಗಳಲ್ಲಿ ಶೇಕಡ 100ರಷ್ಟು ಫಲಿತಾಂಶವನ್ನು ಸಾಧಿಸಿದ ಶಿಕ್ಷಕರನ್ನು ಹಾಗೂ ಈ ಹಿಂದಿನ ಸೆಮಿಸ್ಟರ್/ಅವಧಿಯ ಯಾವುದೇ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಂತರದಲ್ಲಿ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪೂರ್ವಭಾವಿ ಸಭೆಯಲ್ಲಿ ಶಾಸಕರು ಹೇಳಿದರು.
ಇದು ಪ್ರತಿಭಾನ್ವಿತ ವಿದ್ಯಾರ್ಥಿಗಳಲ್ಲಿ ಇನ್ನೂ ಹೆಚ್ಚಿನ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಅಭಿವೃದ್ಧಿ, ಪ್ರೇರಣಾದಾಯಿಯಾಗುವುದರ ಜೊತೆಗೆ ಶಿಕ್ಷಕರಿಗೆ ತಮ್ಮ ಕರ್ತವ್ಯದೆಡೆಗೆ ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಹುಮ್ಮಸ್ಸು ತರಲಿದೆ ಎಂಬುದು ಶಾಸಕ ವೇದವ್ಯಾಸ್ ಕಾಮತ್ ಅವರ ಆಶಯವಾಗಿದೆ.
ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು ಶಕ್ತಿನಗರ, ಕಾರ್ ಸ್ಟ್ರೀಟ್ ಪದವಿ ಪೂರ್ವ ಹಾಗೂ ಪದವಿ ಕಾಲೇಜು ರಥಬೀದಿ, ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಬಲ್ಮಠ, ಬೊಕ್ಕಪಟ್ಣ ಪದವಿ ಪೂರ್ವ ಕಾಲೇಜು, ಹಾಗೂ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಕಾಲೇಜುಗಳು ಈ ಪಟ್ಟಿಯಲ್ಲಿವೆ.
In a bid to encourage teachers and meritorious students to register good results in government pre-university and degree colleges in Mangaluru and to start counselling for students in the coming days, a special training programme for teachers has been organised under the leadership of MLA Vedavyas Kamath at Bharat Scouts and Guides Auditorium on Mannagudde Road in Lalbagh on Saturday, Dec. 30.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm