ಬ್ರೇಕಿಂಗ್ ನ್ಯೂಸ್
27-12-23 01:50 pm Mangalore Correspondent ಕರಾವಳಿ
ಮಂಗಳೂರು, ಡಿ.27: ಎನ್ಎಂಪಿಟಿ ಬಂದರಿನಿಂದ 9.5 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ಲಂಗರು ಹಾಕಿದ್ದ ಲೈಬೀರಿಯಾ ಮೂಲದ ತೈಲ ಟ್ಯಾಂಕರ್ ಹಡಗಿನಲ್ಲಿ ಸಿಬ್ಬಂದಿಯೊಬ್ಬರು ತೀವ್ರ ಅನಾರೋಗ್ಯಕ್ಕಿಡಾಗಿದ ಘಟನೆ ನಡೆದಿದ್ದು ಅವರನ್ನು ಕೋಸ್ಟ್ ಗಾರ್ಡ್ ಸಿಬಂದಿ ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಎಂಟಿ ಐವರಿ ರೇ ಎನ್ನುವ ಹೆಸರಿನ ಹಡಗಿನಲ್ಲಿದ್ದ ಸಿಬ್ಬಂದಿಯೊಬ್ಬರು ನಿನ್ನೆ ರಾತ್ರಿ ವಾಶ್ ರೂಮಿನಲ್ಲಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಕರ್ನಾಟಕದ ಕೋಸ್ಟ್ ಗಾರ್ಡ್ ಸಿಬಂದಿಗೆ ರಕ್ಷಣೆ ಕೋರಿ ಕರೆ ಬಂದಿತ್ತು. ಮಧ್ಯರಾತ್ರಿ 12.30ಕ್ಕೆ ಕರೆ ಬಂದಿದ್ದು ತುರ್ತಾಗಿ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಸಿ-448 ಇಂಟರ್ ಸೆಪ್ಟರ್ ಬೋಟಿನಲ್ಲಿ ವೈದ್ಯರ ಸಹಿತ ಹಡಗಿನ ಬಳಿಗೆ ತೆರಳಿದ್ದಾರೆ. ತಡರಾತ್ರಿ 2.10ರ ವೇಳೆಗೆ ಬೋಟ್ ಅಲ್ಲಿಗೆ ತಲುಪಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಬಂದಿಗೆ ತುರ್ತು ಚಿಕಿತ್ಸೆ ನೀಡಿ, ಕೂಡಲೇ ಅವರನ್ನು ಮಂಗಳೂರಿನ ಬಂದರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.


ತಡರಾತ್ರಿಯಾದರೂ ಕೋಸ್ಟ್ ಗಾರ್ಡ್ ಸಿಬಂದಿ ತುರ್ತಾಗಿ ಸ್ಪಂದಿಸಿ, ರಕ್ಷಣಾ ಕಾರ್ಯ ನಡೆಸಿದ್ದಾರೆ. ಐವರಿ ರೇ ಹಡಗು ತೈಲ ಮತ್ತು ಕೆಮಿಕಲ್ ಸರಕನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದ್ದು 13 ದಿನಗಳ ಹಿಂದೆ ಲೈಬೀರಿಯಾದಿಂದ ಕೆಂಪು ಸಮುದ್ರ ಮೂಲಕ ಮಂಗಳೂರಿನ ಬಂದರಿಗೆ ಆಗಮಿಸಿತ್ತು. ಮಂಗಳೂರು ಬಂದರಿನಲ್ಲಿ ಒಳಬರಲು ಸಿಗ್ನಲ್ ಸಿಗದೇ ಇದ್ದುದರಿಂದ ಸಮುದ್ರ ಮಧ್ಯೆ ಲಂಗರು ಹಾಕಿತ್ತು. ಈ ವೇಳೆ, ಸಿಬಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿತ್ತು.
A crew member of a Liberian oil tanker ship, which was anchored in the sea 9.5 nautical miles from NMPT port, fell seriously ill and was rescued by the Coast Guard personnel and admitted to a hospital in Mangaluru.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm